BREAKING NEWS

ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್

ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ.

ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಮಾರಾಟ ಮಾಡಿದ ಟಿಕೆಟ್ ನಿಂದ ತಾಜ್ ಮಹಲ್ ಈ ವರ್ಷ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

2022-23ರಲ್ಲಿ ತಾಜ್ ಮಹಲ್ 81.89 ಕೋಟಿ ರೂ ಆದಾಯ ಗಳಿಸಿದೆ. ಇದು ಎಎಸ್‌ಐನ ಒಟ್ಟು ಟಿಕೆಟ್(252.85 ಕೋಟಿ ರೂಪಾಯಿ) ಮಾರಾಟದ ಸುಮಾರು ಮೂರನೇ ಒಂದು ಭಾಗದಷ್ಟು ಎಂದು ಅಂಕಿ ಅಂಶಗಳು ಬಹಿರಂಗಪಡಿಸಿವೆ.

ಆದಾಗ್ಯೂ, ಇದು ಕೋವಿಡ್‌ಗೂ ಮೊದಲು ದಾಖಲಿಸಿದ ಗರಿಷ್ಠ ವಾರ್ಷಿಕ ಆದಾಯ 106.83 ಕೋಟಿಗಿಂತ ಇನ್ನೂ ಕಡಿಮೆಯಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ 2022-21ರ ಅವಧಿಯಲ್ಲಿ ದೇಶದ ಅತಿ ಹೆಚ್ಚು ಪ್ರವಾಸಿಗರು ಭೇಟಿ ತಾಜ್ ಮಹಲ್ ಆದಾಯ 11.29 ಕೋಟಿಗೆ ಕುಸಿದಿತ್ತು.

ಕೋವಿಡ್ ನಂತರ ಪ್ರೇಮ ಸೌಧಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, 2022-23ರಲ್ಲಿ ಟಿಕೆಟ್ ಮಾರಾಟದಿಂದ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

2022-23ರಲ್ಲಿ ಕೇವಲ 15.32 ಕೋಟಿ ರೂ.ಗಳನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾದ ಅದೇ ನಗರದ ಆಗ್ರಾ ಕೋಟೆ ಆದಾಯ ಗಳಿಕೆಯಲ್ಲಿ ಎರಡನೆ ಸ್ಥಾನದಲ್ಲಿದೆ.

ಮೂರನೇ ಸ್ಥಾನದಲ್ಲಿರುವ ದೆಹಲಿಯ ಕುತುಬ್ ಮಿನಾರ್ 12.97 ಕೋಟಿ ಆದಾಯ ಗಳಿಸಿದೆ. ದೆಹಲಿಯ ಕೆಂಪು ಕೋಟೆ 12.88 ಕೋಟಿ ರೂಪಾಯಿ ಆದಾಯ ಗಳಿಸಿದೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago