BREAKING NEWS

ದೇಶದಲ್ಲಿ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದ ತಾಜ್ ಮಹಲ್

ನವದೆಹಲಿ: ಪ್ರೇಮಸೌಧ ತಾಜ್ ಮಹಲ್ ಪ್ರವಾಸಿಗರ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ದೇಶದಲ್ಲಿಯೇ ಅತಿ ಹೆಚ್ಚು ಆದಾಯ ತರುವ ಸ್ಮಾರಕವಾಗಿ ಹೊರಹೊಮ್ಮಿದೆ.

ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ASI) ಮಾರಾಟ ಮಾಡಿದ ಟಿಕೆಟ್ ನಿಂದ ತಾಜ್ ಮಹಲ್ ಈ ವರ್ಷ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

2022-23ರಲ್ಲಿ ತಾಜ್ ಮಹಲ್ 81.89 ಕೋಟಿ ರೂ ಆದಾಯ ಗಳಿಸಿದೆ. ಇದು ಎಎಸ್‌ಐನ ಒಟ್ಟು ಟಿಕೆಟ್(252.85 ಕೋಟಿ ರೂಪಾಯಿ) ಮಾರಾಟದ ಸುಮಾರು ಮೂರನೇ ಒಂದು ಭಾಗದಷ್ಟು ಎಂದು ಅಂಕಿ ಅಂಶಗಳು ಬಹಿರಂಗಪಡಿಸಿವೆ.

ಆದಾಗ್ಯೂ, ಇದು ಕೋವಿಡ್‌ಗೂ ಮೊದಲು ದಾಖಲಿಸಿದ ಗರಿಷ್ಠ ವಾರ್ಷಿಕ ಆದಾಯ 106.83 ಕೋಟಿಗಿಂತ ಇನ್ನೂ ಕಡಿಮೆಯಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ 2022-21ರ ಅವಧಿಯಲ್ಲಿ ದೇಶದ ಅತಿ ಹೆಚ್ಚು ಪ್ರವಾಸಿಗರು ಭೇಟಿ ತಾಜ್ ಮಹಲ್ ಆದಾಯ 11.29 ಕೋಟಿಗೆ ಕುಸಿದಿತ್ತು.

ಕೋವಿಡ್ ನಂತರ ಪ್ರೇಮ ಸೌಧಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, 2022-23ರಲ್ಲಿ ಟಿಕೆಟ್ ಮಾರಾಟದಿಂದ 81.89 ಕೋಟಿ ರೂಪಾಯಿ ಆದಾಯ ಗಳಿಸಿದೆ.

2022-23ರಲ್ಲಿ ಕೇವಲ 15.32 ಕೋಟಿ ರೂ.ಗಳನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾದ ಅದೇ ನಗರದ ಆಗ್ರಾ ಕೋಟೆ ಆದಾಯ ಗಳಿಕೆಯಲ್ಲಿ ಎರಡನೆ ಸ್ಥಾನದಲ್ಲಿದೆ.

ಮೂರನೇ ಸ್ಥಾನದಲ್ಲಿರುವ ದೆಹಲಿಯ ಕುತುಬ್ ಮಿನಾರ್ 12.97 ಕೋಟಿ ಆದಾಯ ಗಳಿಸಿದೆ. ದೆಹಲಿಯ ಕೆಂಪು ಕೋಟೆ 12.88 ಕೋಟಿ ರೂಪಾಯಿ ಆದಾಯ ಗಳಿಸಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago