ಹುಬ್ಬಳ್ಳಿ: ಕರ್ನಾಟಕ ರಾಜಕೀಯ ಅಂಗಳದಲ್ಲಿ ಈಗ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಬಹಳ ಚರ್ಚೆಯಾಗುತ್ತಿದೆ. ನಾಡಿದ್ದು ಜುಲೈ 18ರಂದು ದೆಹಲಿಯಲ್ಲಿ ಎನ್ ಡಿಎ ಸಭೆಯಿದ್ದು ಅದಕ್ಕೆ ಮುನ್ನ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ-ಜೆಡಿಎಸ್ ಮೈತ್ರಿಗೆ ವೇದಿಕೆ ಸಿದ್ಧವಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಇದಕ್ಕೆ ಪೂರಕವಾಗಿ ಇಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ನಮ್ಮ ಬಿಜೆಪಿ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರಾದ ದೇವೇಗೌಡರ ನಡುವೆ ಮಾತುಕತೆ ನಡೆಯುತ್ತಿದೆ. ಈಗಾಗಲೇ ಕುಮಾರಸ್ವಾಮಿಯವರು ಕೂಡ ಕೆಲವು ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಆ ದಿಕ್ಕಿನಲ್ಲಿ ಮಾತುಕತೆ ಮುಂದುವರಿಯುತ್ತದೆ. ಮಾತುಕತೆಯ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಯಿದೆ.
ಜುಲೈ 18ರ ನಂತರ ವಿರೋಧ ಪಕ್ಷ ನಾಯಕ: ಬಹುತೇಕವಾಗಿ ಜುಲೈ 18ರ ನಂತರ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯಲಿದೆ ಎಂದರು.
ಮೋದಿ ಮಣಿಸುವುದು ವಿಪಕ್ಷಗಳ ಏಕೈಕ ಉದ್ದೇಶ: ಪ್ರಧಾನಿ ಮೋದಿಯವರನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ, ಸಭೆ ಸೇರುವುದರಲ್ಲಿ ವಿಪಕ್ಷಗಳ ಪ್ರಮುಖ ವಿಷಯವೇ ಇಲ್ಲ, ಬಿಜೆಪಿ ಸೋಲಿಸುವುದೊಂದೇ ಅವರ ಸಭೆಯ ಅಜೆಂಡಾವಾಗಿದೆ ಎಂದು ಇದೇ ಸಂದರ್ಭದಲ್ಲಿ ಟೀಕಿಸಿದರು.
ನಾಳೆಯಿಂದ ಬೆಂಗಳೂರಿನಲ್ಲಿ 2 ದಿನ ಪ್ರತಿಪಕ್ಷ ನಾಯಕರು ಸಭೆ ಮಾಡುತ್ತಿದ್ದಾರೆ. ಆದರೆ, ದೇಶದಲ್ಲಿ ಪ್ರತಿಪಕ್ಷಗಳು ಶಕ್ತಿಯುತವಾಗಿಲ್ಲ. ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗಲ್ಲ, ಮೋದಿ ಸೋಲಿಸಲು ಒಟ್ಟಾಗಿದ್ದಾರೆ, ಅದು ಸಾಧ್ಯವಿಲ್ಲದ ಮಾತು ಎಂದಿದ್ದಾರೆ.
ಹೆಣ್ಣುಮಕ್ಕಳಿಗೆ ಗೃಹಲಕ್ಷ್ಮಿಯಿಂದ ಭ್ರಮನಿರಸನ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮಿ ಯೋಜನೆಗೆ ಸ್ಪಷ್ಟತೆಯಿಲ್ಲ, ಸಂಪೂರ್ಣವಾಗಿ ಅದನ್ನು ಅನುಷ್ಠಾನ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಇದು ತಾಯಂದಿರಿಗೆ ರಾಜ್ಯದ ಎಲ್ಲಾ ಹೆಣ್ಣುಮಕ್ಕಳಿಗೆ ಆಗಸ್ಟ್ 16ರಂದು ಭ್ರಮನಿರಸನವಾಗುತ್ತದೆ ಎಂದು ಟೀಕಿಸಿದರು. ಬಜೆಟ್ ಮೇಲಿನ ಚರ್ಚೆಗೆ ಮುಂದಿನ ವಾರ ಸದನದಲ್ಲಿ ಬಹಳ ಗಂಭೀರವಾದ ಚರ್ಚೆಯಾಗಲಿದೆ ಎಂದರು.
ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಊಹಾಪೋಹವಷ್ಟೆ, ಯಾರೂ ಕಾಂಗ್ರೆಸ್ ಸೇರುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…