BREAKING NEWS

ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್ ಮೊರೆಹೋದ ತಮಿಳುನಾಡು

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಸೋಮವಾರ ಅರ್ಜಿ ಸಲ್ಲಿಸಿದೆ.

ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ ಬೆಳೆ ಹಾನಿಯಾಗಿದೆ. ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ ಬೆಳೆಗಳು ಒಣಗುತ್ತಿವೆ. ತಮ್ಮ ಪಾಲಿನ ನೀರು ಬಿಡುಗಡೆಗೆ ಸೂಚಿಸುವಂತೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಮಿಳುನಾಡು ಸರ್ಕಾರ ಉಲ್ಲೇಖಿಸಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕವು ಕಾವೇರಿ ನೀರು ನಿಯಂತ್ರಣ ಸಮಿತಿಯ ಸೂಚನೆಯನ್ನು ಪಾಲಿಸುತ್ತಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಕಳೆದ ವಾರ ಆರೋಪಿಸಿದ್ದರು.

ಅಲ್ಲದೆ, ಈ ವಿಚಾರವಾಗಿ ಸುಪ್ರೀಂ ಕೋರ್ಟ್​ಗೆ ಮೊರೆಹೋಗುತ್ತೇವೆ ಎಂದೂ ಹೇಳಿದ್ದರು. ಅದಕ್ಕೂ ಮುನ್ನ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ಸಭೆಯಿಂದ ಹೊರನಡೆದ ಘಟನೆಯೂ ನಡೆದಿತ್ತು.

ಕಾವೇರಿ ನೀರು ಬಿಡುಗಡೆ; ಕರ್ನಾಟಕದ ವಾದವೇನು? : ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿಯೂ ಹೇಳಿಕೊಳ್ಳುವಂಥ ಮಳೆಯಾಗಿಲ್ಲ. ಹೀಗಾಗಿ ಹೆಚ್ಚು ನೀರು ಬಿಡುವುದು ಕಷ್ಟ ಎಂಬುದು ಕರ್ನಾಟಕದ ವಾದವಾಗಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳ ಕಾಲ 15,000 ಕ್ಯೂಸೆಕ್ ಬಿಡುಗಡೆ ಮಾಡಲು ನಿರ್ಧರಿಸಿತ್ತು. ಇದಕ್ಕೆ ಕಳೆದ ಶುಕ್ರವಾರ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಅಸಮ್ಮತಿ ಸೂಚಿಸಿದ್ದರು.

ಆಗಸ್ಟ್ 22 ರವರೆಗೆ ತಮಿಳುನಾಡಿಗೆ ಕೇವಲ 8,000 ಕ್ಯೂಸೆಕ್‌ಗಳನ್ನು ಮಾತ್ರ ಬಿಡುಗಡೆ ಮಾಡಬಹುದಷ್ಟೇ ಎಂದು ಕರ್ನಾಟಕದ ಅಧಿಕಾರಿಗಳು ತಿಳಿಸಿದ್ದರು. ಇದಕ್ಕೆ ಸಂಬಂಧಿಸಿದ ಕಾರಣವನ್ನು ಮನವರಿಕೆ ಮಾಡಿಕೊಟ್ಟಿದ್ದರು. ಆದರೆ, ಇದು ತಮಿಳುನಾಡಿನ ಅಸಮಾಧಾನಕ್ಕೆ ಕಾರಣವಾಗಿದೆ.

andolanait

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

3 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

3 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

3 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

3 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

12 hours ago