BREAKING NEWS

ತಮಿಳುನಾಡು: ನೀಟ್ ವಿರುದ್ಧ ಡಿಎಂಕೆಯಿಂದ ಸಹಿ ಅಭಿಯಾನ

ನವದೆಹಲಿ : ನೀಟ್ ವಿರುದ್ಧ ಡಿಎಂಕೆ ಶನಿವಾರ ರಾಜ್ಯ ವ್ಯಾಪಿ ಸಹಿ ಅಭಿಯಾನವನ್ನು ಆರಂಭಿಸಿದೆ.

ಈ ಸಹಿ ಅಭಿಯಾನಕ್ಕೆ ಸಹಿ ಹಾಕಿದ ಮೊದಲ ವ್ಯಕ್ತಿ ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ವರಿಷ್ಠ ಎಂ.ಕೆ. ಸ್ಟಾಲಿನ್. ನೀಟ್ ಅನ್ನು ವಿರೋಧಿಸಿ ನಡೆಯುತ್ತಿರುವ ಈ ಅಭಿಯಾನದಲ್ಲಿ ಪಕ್ಷ ರಾಜ್ಯಾದ್ಯಂತ 50 ದಿನಗಳಲ್ಲಿ 50 ಲಕ್ಷ ಸಹಿ ಸಂಗ್ರಹಿಸುವ ಗುರಿಯನ್ನು ಹೊಂದಿದೆ.

ಕಳೆದ ಕೆಲವು ತಿಂಗಳಿಂದ ನೀಟ್ ಪರೀಕ್ಷೆ ನಡೆಸುವುದನ್ನು ವಿರೋಧಿಸುತ್ತಿರುವ ಸ್ಟಾಲಿನ್, ಬಿಜೆಪಿ ನೀಟ್ ಪರೀಕ್ಷೆಯನ್ನು ರಾಜಕೀಯಗೊಳಿಸಿದೆ ಎಂದು ಆರೋಪಿಸಿದ್ದಾರೆ. ನೀಟ್ ಪರೀಕ್ಷೆಯನು ವಿರೋಧಿಸುತ್ತಿರುವ ಡಿಎಂಕೆ, ಈ ಪರೀಕ್ಷೆ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಇದು ನಗರದಲ್ಲಿರುವ ಹಾಗೂ ಸಾಕಷ್ಟು ಕೋಚಿಂಗ್ ಸೆಂಟರ್‌ಗಳ ಸೌಲಭ್ಯವಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನುಕೂಲಕರವಾಗಿದೆ ಎಂದು ಹೇಳಿದೆ.

ರಾಜ್ಯದಲ್ಲಿ ನೀಟ್ ಪರೀಕ್ಷೆಯ ಕಾರಣಕ್ಕೆ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅದರ ವಿರುದ್ಧ ಪ್ರತಿಭಟನೆ ಆರಂಭವಾಗಿದೆ. ಈ ಹಿಂದೆ ನೀಟ್ ರದ್ದುಗೊಳಿಸುವಂತೆ ಆಗ್ರಹಿಸಿ ನೀಟ್ ಒಂದು ದಿನ ಉಪವಾಸ ಮುಷ್ಕರವನ್ನು ಕೂಡ ನಡೆಸಿತ್ತು.

ಪರೀಕ್ಷೆಯ ವಿರುದ್ಧ ಸಾಕಷ್ಟು ಸಂಖ್ಯೆಯ ಸಹಿಗಳನ್ನು ಸಂಗ್ರಹಿಸಲು ಪಕ್ಷ ಸಫಲವಾದರೆ, ಅದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿ ಕೊಡಲಿದೆ.

ಈ ಸಹಿ ಅಭಿಯಾನವನ್ನು ಉದ್ಘಾಟಿಸಿದ ಡಿಎಂಕೆಯ ಯುವ ಘಟಕದ ಕಾರ್ಯದರ್ಶಿ ಹಾಗೂ ಸಚಿವ ಉದಯನಿಧಿ ಸ್ಟಾಲಿನ್, ‘‘ನೀಟ್‌ನಿಂದ ಎನ್‌ಇಪಿ ವರೆಗೆ ಫ್ಯಾಸಿಸ್ಟ್‌ಗಳು ನಮ್ಮ ಶಿಕ್ಷಣದ ಹಕ್ಕನ್ನು ಕಬಳಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ಇದರ ವಿರುದ್ಧ ನಿರಂತರ ಹೋರಾಡಬೇಕು. ನೀಟ್ ರದ್ದುಪಡಿಸುವ ನಮ್ಮ ಆಗ್ರಹವನ್ನು ನಿರ್ಲಕ್ಷಿಸುವುದನ್ನು ಮುಂದುವರಿಸಿದರೆ, ಜಲ್ಲಿಕಟ್ಟಿನ ಪರವಾಗಿ ನಡೆದ ಸಾಮೂಹಿಕ ಪ್ರತಿಭಟನೆಯಂತಹ ಪ್ರತಿಭಟನೆಯನ್ನು ನಡೆಸಬೇಕಾದೀತು ಎಂದು ನಾನು ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡುತಿದ್ದೇನೆ’’ ಎಂದಿದ್ದಾರೆ.

ಇದಲ್ಲದೆ, ಸಹಿ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಎಐಎಡಿಎಂಕೆ ಸೇರಿದಂತೆ ಹಲವು ಪಕ್ಷಗಳನ್ನು ಉದಯನಿಧಿ ಸ್ಟಾಲಿನ್ ಆಗ್ರಹಿಸಿದ್ದಾರೆ.

andolanait

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

4 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

5 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

6 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

6 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

7 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

9 hours ago