BREAKING NEWS

ತಾಂತ್ರಿಕ ಸಮಸ್ಯೆ: ಹೆಚ್​ಡಿ ದೇವೇಗೌಡರು ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹಾಸನ: ಮಾಜಿ ಪ್ರದಾನಿ ಹೆಚ್​ಡಿ ದೇವೇಗೌಡ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ.

ಮೇಲೆ ಹಾರಿದ್ದ ಹೆಲಿಕಾಪ್ಟರ್​​ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಪೈಲೆಟ್​ ಕೆಳಗಿಳಿಸಿದ್ದಾರೆ. ಬಳಿಕ ಸಮಸ್ಯೆ ಸರಿಪಡಿಸಿ ಮತ್ತೆ ತೆರಳಲಾಗಿದೆ. ಹೆಲಿಕಾಪ್ಟರ್‌ನಲ್ಲಿ ಹೆಚ್‌ಡಿ ದೇವೇಗೌಡ, JDS ರಾಜ್ಯಾಧ್ಯಕ್ಷ ಇಬ್ರಾಹಿಂ ಪ್ರಯಾಣಿಸಿದ್ದು, ಎಚ್.ಕೆ.ಕುಮಾರಸ್ವಾಮಿ ಪರ ಮತಯಾಚಿಸಿ ಸಕಲೇಶಪುರದಿಂದ ಅರಕಲಗೂಡಿಗೆ ತೆರಳುತ್ತಿದ್ದರು.

ಡಿಕೆ ಶಿವಕುಮಾರ್​ ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಅವರು ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್​ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್​​ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್​ಗೆ ಬಂದಿಳಿದಿದ್ದರು.

ಈ ವೇಳೆ, ಹೆಲಿಪ್ಯಾಡ್​ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್​ಗೆ ಸಿಗ್ನಲ್​​ ಕೊಡುವ ಸ್ಮೋಕ್​ ಕ್ಯಾಂಡಲ್​ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.

andolanait

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

5 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

6 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

6 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

6 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

6 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

6 hours ago