ಹಾಸನ: ಮಾಜಿ ಪ್ರದಾನಿ ಹೆಚ್ಡಿ ದೇವೇಗೌಡ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ.
ಮೇಲೆ ಹಾರಿದ್ದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಪೈಲೆಟ್ ಕೆಳಗಿಳಿಸಿದ್ದಾರೆ. ಬಳಿಕ ಸಮಸ್ಯೆ ಸರಿಪಡಿಸಿ ಮತ್ತೆ ತೆರಳಲಾಗಿದೆ. ಹೆಲಿಕಾಪ್ಟರ್ನಲ್ಲಿ ಹೆಚ್ಡಿ ದೇವೇಗೌಡ, JDS ರಾಜ್ಯಾಧ್ಯಕ್ಷ ಇಬ್ರಾಹಿಂ ಪ್ರಯಾಣಿಸಿದ್ದು, ಎಚ್.ಕೆ.ಕುಮಾರಸ್ವಾಮಿ ಪರ ಮತಯಾಚಿಸಿ ಸಕಲೇಶಪುರದಿಂದ ಅರಕಲಗೂಡಿಗೆ ತೆರಳುತ್ತಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಅವರು ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್ಗೆ ಬಂದಿಳಿದಿದ್ದರು.
ಈ ವೇಳೆ, ಹೆಲಿಪ್ಯಾಡ್ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…