BREAKING NEWS

ತಾಂತ್ರಿಕ ಸಮಸ್ಯೆ: ಹೆಚ್​ಡಿ ದೇವೇಗೌಡರು ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹಾಸನ: ಮಾಜಿ ಪ್ರದಾನಿ ಹೆಚ್​ಡಿ ದೇವೇಗೌಡ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ.

ಮೇಲೆ ಹಾರಿದ್ದ ಹೆಲಿಕಾಪ್ಟರ್​​ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಪೈಲೆಟ್​ ಕೆಳಗಿಳಿಸಿದ್ದಾರೆ. ಬಳಿಕ ಸಮಸ್ಯೆ ಸರಿಪಡಿಸಿ ಮತ್ತೆ ತೆರಳಲಾಗಿದೆ. ಹೆಲಿಕಾಪ್ಟರ್‌ನಲ್ಲಿ ಹೆಚ್‌ಡಿ ದೇವೇಗೌಡ, JDS ರಾಜ್ಯಾಧ್ಯಕ್ಷ ಇಬ್ರಾಹಿಂ ಪ್ರಯಾಣಿಸಿದ್ದು, ಎಚ್.ಕೆ.ಕುಮಾರಸ್ವಾಮಿ ಪರ ಮತಯಾಚಿಸಿ ಸಕಲೇಶಪುರದಿಂದ ಅರಕಲಗೂಡಿಗೆ ತೆರಳುತ್ತಿದ್ದರು.

ಡಿಕೆ ಶಿವಕುಮಾರ್​ ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಅವರು ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್​ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್​​ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್​ಗೆ ಬಂದಿಳಿದಿದ್ದರು.

ಈ ವೇಳೆ, ಹೆಲಿಪ್ಯಾಡ್​ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್​ಗೆ ಸಿಗ್ನಲ್​​ ಕೊಡುವ ಸ್ಮೋಕ್​ ಕ್ಯಾಂಡಲ್​ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

5 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

5 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

6 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

6 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

11 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

14 hours ago