BREAKING NEWS

ಚರ್ಚೆಗೆ ಗ್ರಾಸವಾದ ತೇಜಸ್ವಿನಿ ಅನಂತಕುಮಾರ್‌ ಟ್ವೀಟ್‌

ರಾಜ್ಯದಲ್ಲಿ ಚುನಾವಣಾ ಬಿಸಿ ರಂಗೇರಿದೆ. ಮತ್ತೊಂದೆಡೆ ಬಿಜೆಪಿಯಲ್ಲಿ ಟಿಕೆಟ್ ಸಿಗದ ನಾಯಕರ ಬಂಡಾಯ ಬೆಂಕಿ ತಾಂಡವವಾಡುತ್ತಿದೆ. ಈ ಸಮಯದಲ್ಲಿ ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮಾಡಿರುವ ಟ್ವಿಟ್‌ವೊಂದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ತೇಜಸ್ವಿನಿ ಅನಂತಕುಮಾರ್ “ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ? ಎಂದು ಪ್ರಶ್ನಿಸುವ ಮೂಲಕ ಟ್ವಿಟ್ ಮಾಡಿದ್ದಾರೆ. ಈ ಟ್ವಿಟ್‌ಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅದರಲ್ಲೊಬ್ಬ ಈ “ನಂದಿನಿ ವಿಚಾರದಲ್ಲಿ ನಿಮ್ಮ ಹಾಗೂ ನಿಮ್ಮ ಪಕ್ಷದವರ ಮೌನ ನೋಡುತ್ತಿದ್ದೇವೆ. ಆ ಮೌನ ಬೆಳ್ಳಿಯೂ ಅಲ್ಲ ಬಂಗಾರವೂ ಅಲ್ಲ. ಇನ್ನು ವಯಕ್ತಿಕ ವಿಚಾರದಲ್ಲಿ ನಿಮ್ಮಿಷ್ಟಕ್ಕೆ ಮೌನ ಬಂಗಾರವಾಗಬಹುದು” ಎಂದು ಹೇಳಿದ್ದಾನೆ.

ಮತ್ತೋರ್ವ “ಮೌನವಾಗಿ ಕೆಲಸ ಮಾಡುತಿದ್ದ ಸಾಧಕ ಡಾ ಮನಮೋಹನ್ ಸಿಂಗ್ ಅವರಿಗೆ ತಮ್ಮ ಪಕ್ಷ ಮಾಡಿದ ಅವಮಾನಗಳನ್ನು ನೆನೆಯಿರಿ. ಬರೇ ಮಾತೊಂದು ಬಿಟ್ಟು ಬೇರೆ ನಕ್ಕು ಉಪಯೋಗವಿಲ್ಲದ ಮೋದಿಯನ್ನು ಐಟಿ ಲ್ ಯೂಸ್ ಮಾಡಿ ದೊಡ್ಡ ಸಾಧಕ ಅಂತ ಬಿಂಬಿಸಲಾಗುತ್ತಿದೆ ಅಲ್ಲವೇ..?? ಈಗ ನೀವೇ ನಿರ್ಧಾರ ಮಾಡಿ ರಾಜಕೀಯದಲ್ಲಿ ಬಂಗಾರ ಬೇಕೋ ಅಥವಾ ಬೆಳ್ಳಿಯೋ ಎಂದು ಕಾಮೆಂಟ್ ಬರೆದಿದ್ದಾನೆ.

ಮಗದೊಬ್ಬ “ ಸ್ವಲ್ಪ ಕಾಯಬೇಕಾಗಬಹುದು. ನಾವೆಲ್ಲ ಬಯಸುವ ಒಳ್ಳೆಯ ಫಲಿತಾಂಶ. ನಿಮಗೆ ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ. ನಾವೆಲ್ಲ ಜೊತೆಯಾಗಿ ಇದ್ದೇವೆ. ಎಂದು ಕಾಮೆಂಟ್ ಮಾಡಿದ್ದಾರೆ.

ರಾಜ್ಯದಲ್ಲಿ ದಿ. ಅನಂತ್‌ ಕುಮಾರ್ ಬಿಜೆಪಿಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಕೊಡುಗೆಗಳನ್ನು ನೆನೆದು ಉನ್ನತ ಸ್ಥಾನವನ್ನು ಬಿಜೆಪಿ ನೀಡಬಹುದು ಎಂದು ನಿರೀಕ್ಷಿಸಿದ್ದರು. ಸದ್ಯ ತೇಜಸ್ವಿನಿ ಅನಂತ್‌ಕುಮಾ‌ರ್‌ ಅವರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹುದ್ದೆಯನ್ನು ನೀಡಿದೆ.

andolanait

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

9 hours ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

10 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

10 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

10 hours ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

11 hours ago

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

11 hours ago