BREAKING NEWS

ಚರ್ಚೆಗೆ ಗ್ರಾಸವಾದ ತೇಜಸ್ವಿನಿ ಅನಂತಕುಮಾರ್‌ ಟ್ವೀಟ್‌

ರಾಜ್ಯದಲ್ಲಿ ಚುನಾವಣಾ ಬಿಸಿ ರಂಗೇರಿದೆ. ಮತ್ತೊಂದೆಡೆ ಬಿಜೆಪಿಯಲ್ಲಿ ಟಿಕೆಟ್ ಸಿಗದ ನಾಯಕರ ಬಂಡಾಯ ಬೆಂಕಿ ತಾಂಡವವಾಡುತ್ತಿದೆ. ಈ ಸಮಯದಲ್ಲಿ ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮಾಡಿರುವ ಟ್ವಿಟ್‌ವೊಂದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ತೇಜಸ್ವಿನಿ ಅನಂತಕುಮಾರ್ “ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ? ಎಂದು ಪ್ರಶ್ನಿಸುವ ಮೂಲಕ ಟ್ವಿಟ್ ಮಾಡಿದ್ದಾರೆ. ಈ ಟ್ವಿಟ್‌ಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅದರಲ್ಲೊಬ್ಬ ಈ “ನಂದಿನಿ ವಿಚಾರದಲ್ಲಿ ನಿಮ್ಮ ಹಾಗೂ ನಿಮ್ಮ ಪಕ್ಷದವರ ಮೌನ ನೋಡುತ್ತಿದ್ದೇವೆ. ಆ ಮೌನ ಬೆಳ್ಳಿಯೂ ಅಲ್ಲ ಬಂಗಾರವೂ ಅಲ್ಲ. ಇನ್ನು ವಯಕ್ತಿಕ ವಿಚಾರದಲ್ಲಿ ನಿಮ್ಮಿಷ್ಟಕ್ಕೆ ಮೌನ ಬಂಗಾರವಾಗಬಹುದು” ಎಂದು ಹೇಳಿದ್ದಾನೆ.

ಮತ್ತೋರ್ವ “ಮೌನವಾಗಿ ಕೆಲಸ ಮಾಡುತಿದ್ದ ಸಾಧಕ ಡಾ ಮನಮೋಹನ್ ಸಿಂಗ್ ಅವರಿಗೆ ತಮ್ಮ ಪಕ್ಷ ಮಾಡಿದ ಅವಮಾನಗಳನ್ನು ನೆನೆಯಿರಿ. ಬರೇ ಮಾತೊಂದು ಬಿಟ್ಟು ಬೇರೆ ನಕ್ಕು ಉಪಯೋಗವಿಲ್ಲದ ಮೋದಿಯನ್ನು ಐಟಿ ಲ್ ಯೂಸ್ ಮಾಡಿ ದೊಡ್ಡ ಸಾಧಕ ಅಂತ ಬಿಂಬಿಸಲಾಗುತ್ತಿದೆ ಅಲ್ಲವೇ..?? ಈಗ ನೀವೇ ನಿರ್ಧಾರ ಮಾಡಿ ರಾಜಕೀಯದಲ್ಲಿ ಬಂಗಾರ ಬೇಕೋ ಅಥವಾ ಬೆಳ್ಳಿಯೋ ಎಂದು ಕಾಮೆಂಟ್ ಬರೆದಿದ್ದಾನೆ.

ಮಗದೊಬ್ಬ “ ಸ್ವಲ್ಪ ಕಾಯಬೇಕಾಗಬಹುದು. ನಾವೆಲ್ಲ ಬಯಸುವ ಒಳ್ಳೆಯ ಫಲಿತಾಂಶ. ನಿಮಗೆ ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ. ನಾವೆಲ್ಲ ಜೊತೆಯಾಗಿ ಇದ್ದೇವೆ. ಎಂದು ಕಾಮೆಂಟ್ ಮಾಡಿದ್ದಾರೆ.

ರಾಜ್ಯದಲ್ಲಿ ದಿ. ಅನಂತ್‌ ಕುಮಾರ್ ಬಿಜೆಪಿಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಕೊಡುಗೆಗಳನ್ನು ನೆನೆದು ಉನ್ನತ ಸ್ಥಾನವನ್ನು ಬಿಜೆಪಿ ನೀಡಬಹುದು ಎಂದು ನಿರೀಕ್ಷಿಸಿದ್ದರು. ಸದ್ಯ ತೇಜಸ್ವಿನಿ ಅನಂತ್‌ಕುಮಾ‌ರ್‌ ಅವರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹುದ್ದೆಯನ್ನು ನೀಡಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago