BREAKING NEWS

ಚರ್ಚೆಗೆ ಗ್ರಾಸವಾದ ತೇಜಸ್ವಿನಿ ಅನಂತಕುಮಾರ್‌ ಟ್ವೀಟ್‌

ರಾಜ್ಯದಲ್ಲಿ ಚುನಾವಣಾ ಬಿಸಿ ರಂಗೇರಿದೆ. ಮತ್ತೊಂದೆಡೆ ಬಿಜೆಪಿಯಲ್ಲಿ ಟಿಕೆಟ್ ಸಿಗದ ನಾಯಕರ ಬಂಡಾಯ ಬೆಂಕಿ ತಾಂಡವವಾಡುತ್ತಿದೆ. ಈ ಸಮಯದಲ್ಲಿ ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮಾಡಿರುವ ಟ್ವಿಟ್‌ವೊಂದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ತೇಜಸ್ವಿನಿ ಅನಂತಕುಮಾರ್ “ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ? ಎಂದು ಪ್ರಶ್ನಿಸುವ ಮೂಲಕ ಟ್ವಿಟ್ ಮಾಡಿದ್ದಾರೆ. ಈ ಟ್ವಿಟ್‌ಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅದರಲ್ಲೊಬ್ಬ ಈ “ನಂದಿನಿ ವಿಚಾರದಲ್ಲಿ ನಿಮ್ಮ ಹಾಗೂ ನಿಮ್ಮ ಪಕ್ಷದವರ ಮೌನ ನೋಡುತ್ತಿದ್ದೇವೆ. ಆ ಮೌನ ಬೆಳ್ಳಿಯೂ ಅಲ್ಲ ಬಂಗಾರವೂ ಅಲ್ಲ. ಇನ್ನು ವಯಕ್ತಿಕ ವಿಚಾರದಲ್ಲಿ ನಿಮ್ಮಿಷ್ಟಕ್ಕೆ ಮೌನ ಬಂಗಾರವಾಗಬಹುದು” ಎಂದು ಹೇಳಿದ್ದಾನೆ.

ಮತ್ತೋರ್ವ “ಮೌನವಾಗಿ ಕೆಲಸ ಮಾಡುತಿದ್ದ ಸಾಧಕ ಡಾ ಮನಮೋಹನ್ ಸಿಂಗ್ ಅವರಿಗೆ ತಮ್ಮ ಪಕ್ಷ ಮಾಡಿದ ಅವಮಾನಗಳನ್ನು ನೆನೆಯಿರಿ. ಬರೇ ಮಾತೊಂದು ಬಿಟ್ಟು ಬೇರೆ ನಕ್ಕು ಉಪಯೋಗವಿಲ್ಲದ ಮೋದಿಯನ್ನು ಐಟಿ ಲ್ ಯೂಸ್ ಮಾಡಿ ದೊಡ್ಡ ಸಾಧಕ ಅಂತ ಬಿಂಬಿಸಲಾಗುತ್ತಿದೆ ಅಲ್ಲವೇ..?? ಈಗ ನೀವೇ ನಿರ್ಧಾರ ಮಾಡಿ ರಾಜಕೀಯದಲ್ಲಿ ಬಂಗಾರ ಬೇಕೋ ಅಥವಾ ಬೆಳ್ಳಿಯೋ ಎಂದು ಕಾಮೆಂಟ್ ಬರೆದಿದ್ದಾನೆ.

ಮಗದೊಬ್ಬ “ ಸ್ವಲ್ಪ ಕಾಯಬೇಕಾಗಬಹುದು. ನಾವೆಲ್ಲ ಬಯಸುವ ಒಳ್ಳೆಯ ಫಲಿತಾಂಶ. ನಿಮಗೆ ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ. ನಾವೆಲ್ಲ ಜೊತೆಯಾಗಿ ಇದ್ದೇವೆ. ಎಂದು ಕಾಮೆಂಟ್ ಮಾಡಿದ್ದಾರೆ.

ರಾಜ್ಯದಲ್ಲಿ ದಿ. ಅನಂತ್‌ ಕುಮಾರ್ ಬಿಜೆಪಿಗಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಕೊಡುಗೆಗಳನ್ನು ನೆನೆದು ಉನ್ನತ ಸ್ಥಾನವನ್ನು ಬಿಜೆಪಿ ನೀಡಬಹುದು ಎಂದು ನಿರೀಕ್ಷಿಸಿದ್ದರು. ಸದ್ಯ ತೇಜಸ್ವಿನಿ ಅನಂತ್‌ಕುಮಾ‌ರ್‌ ಅವರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹುದ್ದೆಯನ್ನು ನೀಡಿದೆ.

andolanait

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

9 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

10 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

12 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

13 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

16 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

16 hours ago