ಇಂದು ( ಡಿಸೆಂಬರ್ 3 ) ರಾಜಸ್ಥಾನ್, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ್ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ಮತ ಎಣಿಕೆ ಆರಂಭವಾದಾಗಿನಿಂದಲೂ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ಆರಂಭದಿಂದಲೂ ಮುನ್ನಡೆ ಸಾಧಿಸಿ ಗೆಲುವಿನತ್ತ ಹೆಜ್ಜೆ ಹಾಕುತ್ತಿರುವ ಕಾಂಗ್ರೆಸ್ ತನ್ನ ಗೆಲುವಿನ ಖಾತೆ ತೆರೆದಿದೆ. ಹೌದು, ಇಲ್ಲಿನ ಅಶ್ವರಾವುಪೇಟ ವಿಧಾನಸಭೆ ಕ್ಷೇತ್ರದಲ್ಲಿ ಆದಿನಾರಾಯಣ ಎಂಬ ಕಾಂಗ್ರೆಸ್ ಅಭ್ಯರ್ಥಿ ಬರೋಬ್ಬರಿ 28358 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಮೊದಲ ಅಭ್ಯರ್ಥಿ ಎನಿಸಿಕೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆಲುವಿನ ಖಾತೆ ತೆರೆದಿದ್ದು, ಉಳಿದ ಪಕ್ಷಗಳು ಇನ್ನೂ ಗೆಲುವಿನ ಅಕೌಂಟ್ ಓಪನ್ ಮಾಡಬೇಕಿದೆ.
ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್ನ ಮತ್ತೋರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಇಲ್ಲಂದು ವಿಧಾನಸಭೆ ಕ್ಷೇತ್ರದಲ್ಲಿ ಕನಕಯ್ಯ ಬರೋಬ್ಬರಿ 38000 ಮತಗಳ ಅಂತರದಿಂದ ಗೆಲುವು ಸಾಧಿಸಿದೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…