BREAKING NEWS

Telangana Election Results 2023: ತೆಲಂಗಾಣ ಸಿಎಂ ರೇಸ್‌ನಲ್ಲಿರುವ ಅಭ್ಯರ್ಥಿಗಳು

ಇಂದು ( ಡಿಸೆಂಬರ್‌ 3 ) ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್‌ ಮ್ಯಾಜಿಕ್ ನಂಬರ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡು ಗೆಲುವಿನತ್ತ ದಾಪುಗಾಲು ಇಡುತ್ತಿದೆ.

ತೆಲಂಗಾಣ ಕಾಂಗ್ರೆಸ್‌ನ ಅಧ್ಯಕ್ಷ ರೇವಂತ್‌ ರೆಡ್ಡಿ ಕಾಮರೆಡ್ಡಿ ಹಾಗೂ ಕೊಡಂಗಲ್‌ ಎರಡೂ ವಿಧಾನಸಭಾ ಕ್ಷೇತ್ರದಲ್ಲಿಯೂ ಮುನ್ನಡೆಯನ್ನು ಸಾಧಿಸಿದ್ದಾರೆ. ಈಗಾಗಲೇ ರೇವಂತ್‌ ರೆಡ್ಡಿ ರೋಡ್‌ ಶೋ ಸಹ ನಡೆದಿದ್ದು, ಇವರು ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಯಾಗಲು ರೇಸ್‌ನಲ್ಲಿರುವ ಅಭ್ಯರ್ಥಿಗಳ ಪಟ್ಟಿ ಈ ಕೆಳಕಂಡಂತಿದೆ..

* ರೇವಂತ್‌ ರೆಡ್ಡಿ – ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಸಕ್ಸಸ್‌ಗೆ ಪ್ರಮುಖ ಕಾರಣರಾಗಿರುವ ರೇವಂತ್‌ ರೆಡ್ಡಿ ಸಿಎಂ ರೇಸ್‌ನಲ್ಲಿರುವ ಪ್ರಮುಖ ಅಭ್ಯರ್ಥಿ.
* ಮಲ್ಲು ಭಟ್ಟಿ ವಿಕ್ರಮಾರ್ಕ – ತೆಲಂಗಾಣ ವಿಧಾನಸಭೆಯ ದ್ವಿತೀಯ ವಿರೋಧಪಕ್ಷದ ನಾಯಕನಾಗಿದ್ದ ಮಲ್ಲು ಭಟ್ಟಿ ವಿಕ್ರಮಾರ್ಕ ಸಹ ಸಿಎಂ ರೇಸ್‌ನಲ್ಲಿದ್ದಾರೆ.
* ಕೊಮಟಿರೆಡ್ಡಿ ವೆಂಕಟರೆಡ್ಡಿ – ಭುವನಗಿರಿಯ ಎಂಪಿಯಾಗಿರುವ ಕೊಮಟಿರೆಡ್ಡಿ ಸಹ ಸಿಎಂ ರೇಸ್‌ನಲ್ಲಿರುವ ಅಭ್ಯರ್ಥಿ.
* ಪೊಂಗುಲೆಟಿ ಶ್ರೀನಿವಾಸ್‌ ರೆಡ್ಡಿ – ಈ ಹಿಂದೆ ಬಿಆರ್‌ಎಸ್‌ ಪಕ್ಷದಲ್ಲಿದ್ದು ಇದೇ ವರ್ಷ ಪಕ್ಷದ ವಿರುದ್ಧದ ಚಟುವಟಿಕೆಗಳಿಂದ ಅಮಾನತ್ತುಗೊಂಡಿದ್ದ ಇವರು ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರಿದ್ದು ಸಿಎಂ ಸ್ಥಾನದ ರೇಸ್‌ನಲ್ಲಿದ್ದಾರೆ.

andolana

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

32 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

1 hour ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

1 hour ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

2 hours ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

2 hours ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

2 hours ago