BREAKING NEWS

Telangana Election Results 2023: ತೆಲಂಗಾಣ ಸಿಎಂ ರೇಸ್‌ನಲ್ಲಿರುವ ಅಭ್ಯರ್ಥಿಗಳು

ಇಂದು ( ಡಿಸೆಂಬರ್‌ 3 ) ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್‌ ಮ್ಯಾಜಿಕ್ ನಂಬರ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡು ಗೆಲುವಿನತ್ತ ದಾಪುಗಾಲು ಇಡುತ್ತಿದೆ.

ತೆಲಂಗಾಣ ಕಾಂಗ್ರೆಸ್‌ನ ಅಧ್ಯಕ್ಷ ರೇವಂತ್‌ ರೆಡ್ಡಿ ಕಾಮರೆಡ್ಡಿ ಹಾಗೂ ಕೊಡಂಗಲ್‌ ಎರಡೂ ವಿಧಾನಸಭಾ ಕ್ಷೇತ್ರದಲ್ಲಿಯೂ ಮುನ್ನಡೆಯನ್ನು ಸಾಧಿಸಿದ್ದಾರೆ. ಈಗಾಗಲೇ ರೇವಂತ್‌ ರೆಡ್ಡಿ ರೋಡ್‌ ಶೋ ಸಹ ನಡೆದಿದ್ದು, ಇವರು ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಯಾಗಲು ರೇಸ್‌ನಲ್ಲಿರುವ ಅಭ್ಯರ್ಥಿಗಳ ಪಟ್ಟಿ ಈ ಕೆಳಕಂಡಂತಿದೆ..

* ರೇವಂತ್‌ ರೆಡ್ಡಿ – ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಸಕ್ಸಸ್‌ಗೆ ಪ್ರಮುಖ ಕಾರಣರಾಗಿರುವ ರೇವಂತ್‌ ರೆಡ್ಡಿ ಸಿಎಂ ರೇಸ್‌ನಲ್ಲಿರುವ ಪ್ರಮುಖ ಅಭ್ಯರ್ಥಿ.
* ಮಲ್ಲು ಭಟ್ಟಿ ವಿಕ್ರಮಾರ್ಕ – ತೆಲಂಗಾಣ ವಿಧಾನಸಭೆಯ ದ್ವಿತೀಯ ವಿರೋಧಪಕ್ಷದ ನಾಯಕನಾಗಿದ್ದ ಮಲ್ಲು ಭಟ್ಟಿ ವಿಕ್ರಮಾರ್ಕ ಸಹ ಸಿಎಂ ರೇಸ್‌ನಲ್ಲಿದ್ದಾರೆ.
* ಕೊಮಟಿರೆಡ್ಡಿ ವೆಂಕಟರೆಡ್ಡಿ – ಭುವನಗಿರಿಯ ಎಂಪಿಯಾಗಿರುವ ಕೊಮಟಿರೆಡ್ಡಿ ಸಹ ಸಿಎಂ ರೇಸ್‌ನಲ್ಲಿರುವ ಅಭ್ಯರ್ಥಿ.
* ಪೊಂಗುಲೆಟಿ ಶ್ರೀನಿವಾಸ್‌ ರೆಡ್ಡಿ – ಈ ಹಿಂದೆ ಬಿಆರ್‌ಎಸ್‌ ಪಕ್ಷದಲ್ಲಿದ್ದು ಇದೇ ವರ್ಷ ಪಕ್ಷದ ವಿರುದ್ಧದ ಚಟುವಟಿಕೆಗಳಿಂದ ಅಮಾನತ್ತುಗೊಂಡಿದ್ದ ಇವರು ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರಿದ್ದು ಸಿಎಂ ಸ್ಥಾನದ ರೇಸ್‌ನಲ್ಲಿದ್ದಾರೆ.

andolana

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

4 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

4 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

4 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

7 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

7 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

7 hours ago