ಇಂದು ( ಡಿಸೆಂಬರ್ 3 ) ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಮ್ಯಾಜಿಕ್ ನಂಬರ್ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡು ಗೆಲುವಿನತ್ತ ದಾಪುಗಾಲು ಇಡುತ್ತಿದೆ.
ತೆಲಂಗಾಣ ಕಾಂಗ್ರೆಸ್ನ ಅಧ್ಯಕ್ಷ ರೇವಂತ್ ರೆಡ್ಡಿ ಕಾಮರೆಡ್ಡಿ ಹಾಗೂ ಕೊಡಂಗಲ್ ಎರಡೂ ವಿಧಾನಸಭಾ ಕ್ಷೇತ್ರದಲ್ಲಿಯೂ ಮುನ್ನಡೆಯನ್ನು ಸಾಧಿಸಿದ್ದಾರೆ. ಈಗಾಗಲೇ ರೇವಂತ್ ರೆಡ್ಡಿ ರೋಡ್ ಶೋ ಸಹ ನಡೆದಿದ್ದು, ಇವರು ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಯಾಗಲು ರೇಸ್ನಲ್ಲಿರುವ ಅಭ್ಯರ್ಥಿಗಳ ಪಟ್ಟಿ ಈ ಕೆಳಕಂಡಂತಿದೆ..
* ರೇವಂತ್ ರೆಡ್ಡಿ – ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಸಕ್ಸಸ್ಗೆ ಪ್ರಮುಖ ಕಾರಣರಾಗಿರುವ ರೇವಂತ್ ರೆಡ್ಡಿ ಸಿಎಂ ರೇಸ್ನಲ್ಲಿರುವ ಪ್ರಮುಖ ಅಭ್ಯರ್ಥಿ.
* ಮಲ್ಲು ಭಟ್ಟಿ ವಿಕ್ರಮಾರ್ಕ – ತೆಲಂಗಾಣ ವಿಧಾನಸಭೆಯ ದ್ವಿತೀಯ ವಿರೋಧಪಕ್ಷದ ನಾಯಕನಾಗಿದ್ದ ಮಲ್ಲು ಭಟ್ಟಿ ವಿಕ್ರಮಾರ್ಕ ಸಹ ಸಿಎಂ ರೇಸ್ನಲ್ಲಿದ್ದಾರೆ.
* ಕೊಮಟಿರೆಡ್ಡಿ ವೆಂಕಟರೆಡ್ಡಿ – ಭುವನಗಿರಿಯ ಎಂಪಿಯಾಗಿರುವ ಕೊಮಟಿರೆಡ್ಡಿ ಸಹ ಸಿಎಂ ರೇಸ್ನಲ್ಲಿರುವ ಅಭ್ಯರ್ಥಿ.
* ಪೊಂಗುಲೆಟಿ ಶ್ರೀನಿವಾಸ್ ರೆಡ್ಡಿ – ಈ ಹಿಂದೆ ಬಿಆರ್ಎಸ್ ಪಕ್ಷದಲ್ಲಿದ್ದು ಇದೇ ವರ್ಷ ಪಕ್ಷದ ವಿರುದ್ಧದ ಚಟುವಟಿಕೆಗಳಿಂದ ಅಮಾನತ್ತುಗೊಂಡಿದ್ದ ಇವರು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದು ಸಿಎಂ ಸ್ಥಾನದ ರೇಸ್ನಲ್ಲಿದ್ದಾರೆ.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…