BREAKING NEWS

Telangana Election Results 2023: ತೆಲಂಗಾಣ ಸಿಎಂ ರೇಸ್‌ನಲ್ಲಿರುವ ಅಭ್ಯರ್ಥಿಗಳು

ಇಂದು ( ಡಿಸೆಂಬರ್‌ 3 ) ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್‌ ಮ್ಯಾಜಿಕ್ ನಂಬರ್‌ಗಿಂತ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡು ಗೆಲುವಿನತ್ತ ದಾಪುಗಾಲು ಇಡುತ್ತಿದೆ.

ತೆಲಂಗಾಣ ಕಾಂಗ್ರೆಸ್‌ನ ಅಧ್ಯಕ್ಷ ರೇವಂತ್‌ ರೆಡ್ಡಿ ಕಾಮರೆಡ್ಡಿ ಹಾಗೂ ಕೊಡಂಗಲ್‌ ಎರಡೂ ವಿಧಾನಸಭಾ ಕ್ಷೇತ್ರದಲ್ಲಿಯೂ ಮುನ್ನಡೆಯನ್ನು ಸಾಧಿಸಿದ್ದಾರೆ. ಈಗಾಗಲೇ ರೇವಂತ್‌ ರೆಡ್ಡಿ ರೋಡ್‌ ಶೋ ಸಹ ನಡೆದಿದ್ದು, ಇವರು ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ. ತೆಲಂಗಾಣದಲ್ಲಿ ಮುಖ್ಯಮಂತ್ರಿಯಾಗಲು ರೇಸ್‌ನಲ್ಲಿರುವ ಅಭ್ಯರ್ಥಿಗಳ ಪಟ್ಟಿ ಈ ಕೆಳಕಂಡಂತಿದೆ..

* ರೇವಂತ್‌ ರೆಡ್ಡಿ – ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಸಕ್ಸಸ್‌ಗೆ ಪ್ರಮುಖ ಕಾರಣರಾಗಿರುವ ರೇವಂತ್‌ ರೆಡ್ಡಿ ಸಿಎಂ ರೇಸ್‌ನಲ್ಲಿರುವ ಪ್ರಮುಖ ಅಭ್ಯರ್ಥಿ.
* ಮಲ್ಲು ಭಟ್ಟಿ ವಿಕ್ರಮಾರ್ಕ – ತೆಲಂಗಾಣ ವಿಧಾನಸಭೆಯ ದ್ವಿತೀಯ ವಿರೋಧಪಕ್ಷದ ನಾಯಕನಾಗಿದ್ದ ಮಲ್ಲು ಭಟ್ಟಿ ವಿಕ್ರಮಾರ್ಕ ಸಹ ಸಿಎಂ ರೇಸ್‌ನಲ್ಲಿದ್ದಾರೆ.
* ಕೊಮಟಿರೆಡ್ಡಿ ವೆಂಕಟರೆಡ್ಡಿ – ಭುವನಗಿರಿಯ ಎಂಪಿಯಾಗಿರುವ ಕೊಮಟಿರೆಡ್ಡಿ ಸಹ ಸಿಎಂ ರೇಸ್‌ನಲ್ಲಿರುವ ಅಭ್ಯರ್ಥಿ.
* ಪೊಂಗುಲೆಟಿ ಶ್ರೀನಿವಾಸ್‌ ರೆಡ್ಡಿ – ಈ ಹಿಂದೆ ಬಿಆರ್‌ಎಸ್‌ ಪಕ್ಷದಲ್ಲಿದ್ದು ಇದೇ ವರ್ಷ ಪಕ್ಷದ ವಿರುದ್ಧದ ಚಟುವಟಿಕೆಗಳಿಂದ ಅಮಾನತ್ತುಗೊಂಡಿದ್ದ ಇವರು ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರಿದ್ದು ಸಿಎಂ ಸ್ಥಾನದ ರೇಸ್‌ನಲ್ಲಿದ್ದಾರೆ.

andolana

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

3 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

3 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

3 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

3 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

3 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

3 hours ago