BREAKING NEWS

ತೆಲಂಗಾಣ ಬಿಜೆಪಿ ಅಧ್ಯಕ್ಷ ಸಂಜಯ್ ಕುಮಾರ್ ಬಂಧನ

ಹೈದರಾಬಾದ್ – ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಮಧ್ಯರಾತ್ರಿಯ ಕರೀಂನಗರದಲ್ಲಿ ಪೊಲೀಸರ ತಂಡ ಬಂಧಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿದ್ದ ಅವರು ಸಿಎಂ ಚಂದ್ರಶೇಖರ ರಾವ್ ವಿರುದ್ದ ವಾಗ್ದಾಳಿ ನಡೆಸಿದ್ದರು. ವಾರಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯಕ್ಕೆ ಭೇಟಿ ನೀಡುವ ಕಾಯುಕ್ರಮವಿದ್ದು ಇದರ ಸಿದ್ದತೆ ನಡುವೆ ಬಂಧಿಸಿರುವುದಕ್ಕೆ ವ್ಯಾಪಕ ಟೀಕೆಗಳು ಶುರುವಾಗಿದೆ.
ಸಂಸದರ ನಿವಾಸದ ಬಳಿ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರಸ್ತುತ ಅವರನ್ನು ನಲ್ಗೌಂಡ ಜಿಲ್ಲೆಯ ಬೊಮ್ಮಲ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಯಾವ ಕಾರಣಕ್ಕೆ ಬಂಧಿಸಲಾಗಿದೆ ಎಂಬುದು ಗೊತ್ತಿಲ್ಲ ಬೆಳಗ್ಗೆಯೇ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಬೇಕಿತ್ತು ಆದರೆ ಸಂಸದರನ್ನು ಎಲ್ಲಿಗೆ ಕರೆದುಕೊಮಡು ಹೋಗಿದ್ದಾರೆ ತಿಳಿಯುತ್ತಿಲ್ಲ ತೆಲಂಗಾಣದಲ್ಲಿ ಪ್ರಧಾನಿ ಮೋದಿ ಅವರು ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ತಿಳಿಸಿದ್ದಾರೆ.
ಬಂಡಿ ಸಂಜಯ್ ಬಂಧನದ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತೆಲಂಗಾಣ ಬಿಜೆಪಿ ನಾಯಕರು ತಿಳಿಸಿದ್ದಾರೆ.

lokesh

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

35 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

45 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

52 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago