BREAKING NEWS

ತೆಲಂಗಾಣ ಬಿಜೆಪಿ ಅಧ್ಯಕ್ಷ ಸಂಜಯ್ ಕುಮಾರ್ ಬಂಧನ

ಹೈದರಾಬಾದ್ – ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಮಧ್ಯರಾತ್ರಿಯ ಕರೀಂನಗರದಲ್ಲಿ ಪೊಲೀಸರ ತಂಡ ಬಂಧಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿದ್ದ ಅವರು ಸಿಎಂ ಚಂದ್ರಶೇಖರ ರಾವ್ ವಿರುದ್ದ ವಾಗ್ದಾಳಿ ನಡೆಸಿದ್ದರು. ವಾರಾಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯಕ್ಕೆ ಭೇಟಿ ನೀಡುವ ಕಾಯುಕ್ರಮವಿದ್ದು ಇದರ ಸಿದ್ದತೆ ನಡುವೆ ಬಂಧಿಸಿರುವುದಕ್ಕೆ ವ್ಯಾಪಕ ಟೀಕೆಗಳು ಶುರುವಾಗಿದೆ.
ಸಂಸದರ ನಿವಾಸದ ಬಳಿ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರಸ್ತುತ ಅವರನ್ನು ನಲ್ಗೌಂಡ ಜಿಲ್ಲೆಯ ಬೊಮ್ಮಲ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಯಾವ ಕಾರಣಕ್ಕೆ ಬಂಧಿಸಲಾಗಿದೆ ಎಂಬುದು ಗೊತ್ತಿಲ್ಲ ಬೆಳಗ್ಗೆಯೇ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಬೇಕಿತ್ತು ಆದರೆ ಸಂಸದರನ್ನು ಎಲ್ಲಿಗೆ ಕರೆದುಕೊಮಡು ಹೋಗಿದ್ದಾರೆ ತಿಳಿಯುತ್ತಿಲ್ಲ ತೆಲಂಗಾಣದಲ್ಲಿ ಪ್ರಧಾನಿ ಮೋದಿ ಅವರು ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ತಿಳಿಸಿದ್ದಾರೆ.
ಬಂಡಿ ಸಂಜಯ್ ಬಂಧನದ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ತೆಲಂಗಾಣ ಬಿಜೆಪಿ ನಾಯಕರು ತಿಳಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago