Mysore
26
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

Telangana Election Results 2023: ಕೆಸಿಆರ್‌ ಹಾಗೂ ಪುತ್ರನಿಗೆ ಹಿನ್ನಡೆ

ಇಂದು ( ಡಿಸೆಂಬರ್‌ 3 ) ರಾಜಸ್ಥಾನ್‌, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್‌ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ನೆರೆಯ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬೆಳಗ್ಗೆ 10.30ರ ಸಮಯಕ್ಕೆ ಕಾಂಗ್ರೆಸ್‌ 63 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇನ್ನು ಕಾಮರೆಡ್ಡಿ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರೇವಂತ್‌ ರೆಡ್ಡಿ ಎದುರು ಕೆ ಚಂದ್ರಶೇಖರ್‌ ರಾವ್‌ ಹಿನ್ನಡೆ ಅನುಭವಿಸಿದ್ದಾರೆ. ಈ ಕ್ಷೇತ್ರ ಮಾತ್ರವಲ್ಲದೇ ಕೆಸಿಆರ್‌ ಕಣಕ್ಕಿಳಿದಿದ್ದ ಮತ್ತೊಂದು ಕ್ಷೇತ್ರ ಗೆಜ್ವಾಲ್‌ನಲ್ಲೂ ಹಿನ್ನಡೆ ಅನುಭವಿಸಿದ್ದಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿ ಈಟಲ ರಾಜೇಂದರ್‌ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. ಕೆಸಿಆರ್ ಮಾತ್ರವಲ್ಲದೇ ಅವರ ಪುತ್ರ ಕೆಟಿ ರಾಮಾರಾವ್‌ ಸಹ ಹಿನ್ನಡೆ ಅನುಭವಿಸಿದ್ದಾರೆ. ಸಿರ್ಸಿಲಾ ಕ್ಷೇತ್ರದಲ್ಲಿ ಕೆಟಿಆರ್‌ ಸ್ಪರ್ಧಿಸಿದ್ದಾರೆ.

ಬೆಳಗ್ಗೆ 10.30 ರ ಸಮಯಕ್ಕೆ ತೆಲಂಗಾಣದಲ್ಲಿ ಎಲ್ಲಾ ಕ್ಷೇತ್ರಗಳ ಮೊದಲ ಸುತ್ತಿನ ಮತಎಣಿಕೆ ಮುಗಿದಿದ್ದು ಈ ಸಮಯಕ್ಕೆ ಕಾಂಗ್ರೆಸ್‌ 67, ಬಿಆರ್‌ಎಸ್‌ 45, ಬಿಜೆಪಿ 3, ಎಐಎಂಐಎಂ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!