ಇಂದು ( ಡಿಸೆಂಬರ್ 3 ) ರಾಜಸ್ಥಾನ್, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ್ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ನೆರೆಯ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬೆಳಗ್ಗೆ 10.30ರ ಸಮಯಕ್ಕೆ ಕಾಂಗ್ರೆಸ್ 63 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಕಾಮರೆಡ್ಡಿ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೇವಂತ್ ರೆಡ್ಡಿ ಎದುರು ಕೆ ಚಂದ್ರಶೇಖರ್ ರಾವ್ ಹಿನ್ನಡೆ ಅನುಭವಿಸಿದ್ದಾರೆ. ಈ ಕ್ಷೇತ್ರ ಮಾತ್ರವಲ್ಲದೇ ಕೆಸಿಆರ್ ಕಣಕ್ಕಿಳಿದಿದ್ದ ಮತ್ತೊಂದು ಕ್ಷೇತ್ರ ಗೆಜ್ವಾಲ್ನಲ್ಲೂ ಹಿನ್ನಡೆ ಅನುಭವಿಸಿದ್ದಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿ ಈಟಲ ರಾಜೇಂದರ್ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. ಕೆಸಿಆರ್ ಮಾತ್ರವಲ್ಲದೇ ಅವರ ಪುತ್ರ ಕೆಟಿ ರಾಮಾರಾವ್ ಸಹ ಹಿನ್ನಡೆ ಅನುಭವಿಸಿದ್ದಾರೆ. ಸಿರ್ಸಿಲಾ ಕ್ಷೇತ್ರದಲ್ಲಿ ಕೆಟಿಆರ್ ಸ್ಪರ್ಧಿಸಿದ್ದಾರೆ.
ಬೆಳಗ್ಗೆ 10.30 ರ ಸಮಯಕ್ಕೆ ತೆಲಂಗಾಣದಲ್ಲಿ ಎಲ್ಲಾ ಕ್ಷೇತ್ರಗಳ ಮೊದಲ ಸುತ್ತಿನ ಮತಎಣಿಕೆ ಮುಗಿದಿದ್ದು ಈ ಸಮಯಕ್ಕೆ ಕಾಂಗ್ರೆಸ್ 67, ಬಿಆರ್ಎಸ್ 45, ಬಿಜೆಪಿ 3, ಎಐಎಂಐಎಂ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…