ಬೆಂಗಳೂರು : ಕಾರು ಹಾಗೂ ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ನಡೆದಿದೆ.
ಬೆಳಗ್ಗಿನ ಜಾವ ಸುಮಾರು ನಾಲ್ಕು ಘಂಟೆಯ ವೇಳೆಗೆ ಘಟನೆ ನಡೆದಿದೆ. ಪತಿ ಮಹೇಂದ್ರನ್, ಪತ್ನಿ ಸಿಂಧು ಮತು ಅವರ ಎರಡು ಮಕ್ಕಳು ಟಾಟಾ ನೆಕ್ಸಾನ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ.
ಘಟನೆಯಿಂದ ಪತ್ನಿ ಸಿಂಧು, ಎರಡು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪತಿ ಮಹೇಂದ್ರನ್ ಮತ್ತು ಇನ್ನೊಂದು ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…
ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್ ಬಂದ್ಗೆ ಕರೆ ನೀಡಲಾಗಿದೆ.…
ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…
ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…