BREAKING NEWS

ಭೀಕರ ಅಪಘಾತ : ಮೀಸಲು ಪಡೆ ಪೇದೆಗಳಿಬ್ಬರ ದುರ್ಮರಣ

ಮೈಸೂರು : ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ್ದಾರೆ.
ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ ಮೈಸೂರಿನ 5ನೇ ಬಟಾಲಿಯನ್ ನ ಪೇದೆಗಳಾದ ಮೈಸೂರಿನ ಕುಂಬಾರಕೊಪ್ಪಲು ಬಡಾವಣೆ ನಿವಾಸಿ ಪಿ.ಮಹೇಶ್ (23) ಹಾಗೂ ಬಿಜಾಪುರ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಮರನಾಥ ತಾಳಿಕೋಟೆ (24) ಮೃತಪಟ್ಟವರು.

ನಗರದ ಸಿದ್ದಾರ್ಥ ಬಡಾವಣೆ ಸಮೀಪದ ಫುಡ್ ಸ್ಟ್ರೀಟ್ ನಲ್ಲಿ ಊಟ ಸೇವಿಸಿದ ಬಳಿಕ ತಮ್ಮ ಪಲ್ಸರ್ ಬೈಕಿನಲ್ಲಿ ಕೆಎಸ್ ಆರ್ ಪಿ ಬಟಾಲಿಯನ್ ಕೇಂದ್ರದತ್ತ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಮಹೀಂದ್ರ ಥಾರ್ ವಾಹನ ಪೇದೆಗಳಿದ್ದ ಬೈಕಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಪಲ್ಸರ್ ಬೈಕ್ ಸುಮಾರು ಹತ್ತು ಮೀಟರ್ ದೂರ ಹೋಗಿ ಬಿದ್ದಿದ್ದರೆ, ಇಬ್ಬರೂ ಪೇದೆಗಳು ಮೇಲೆಕ್ಕೆ ಎಗರಿ ನೆಲಕ್ಕೆ ಅಪ್ಪಳಿಸಿದ್ದಾರೆ. ಇದರಿಂದಾಗಿ ಇಬ್ಬರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಘಟನೆ ಬಳಿಕ ಅಪಘಾತ ನಡೆಸಿದ ಮಹೀಂದ್ರ ಥಾರ್ ವಾಹನ ಸವಾರ ತನ್ನ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಅಷ್ಟರಲ್ಲಿ ಎಚ್ಚೆತ್ತುಕೊಂಡ ಸಾರ್ವಜನಿಕರು ಆತನ‌ ವಾಹನ ಬೆನ್ನತ್ತಿ ಆಲನಹಳ್ಳಿ ಸಮೀಪದ ರಿಂಗ್ ರಸ್ತೆ ಬಳಿ ವಾಹನಕ್ಕೆ ಅಡ್ಡಲಾಗಿ ನಿಂತು ತಡೆದು ಆರೋಪಿಯನ್ನು ಹಿಡಿದಿದ್ದಾರೆ.

ನಂತರ ವಿಚಾರ ತಿಳಿದ ಸಿದ್ದಾರ್ಥನಗರ ಸಂಚಾರಿ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ಇಬ್ಬರೂ ಪೇದೆಗಳ ಮರಣೋತ್ತರ ಪರೀಕ್ಷೆ ಸೋಮವಾರ ಬೆಳಗ್ಗೆ ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ನಡೆದ ಬಳಿಕ ಸರ್ಕಾರಿ ಗೌರವ ಸಲ್ಲಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.

ಅಮರನಾಥ ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಜಮಖಂಡಿಗೆ ಕಳುಹಿಸಲಾಗಿದ್ದು, ಇದಕ್ಕಾಗಿ ಓರ್ವ ಇನ್ಸ್‌ಪೆಕ್ಟರ್ ಹಾಗೂ ಇಬ್ಬರು ಸಿಬ್ಬಂದಿಯನ್ನು ಕಳುಹಿಸಿಕೊಡಲಾಗಿದೆ ಎಂದು ರಾಜ್ಯ ಮೀಸಲು ಪೊಲೀಸ್ ಪಡೆಗೆ 5ನೇ ಬಟಾಲಿಯನ್ ಕಮಾಂಡೆಂಟ್ ಜನಾರ್ದನ್ ತಿಳಿಸಿದ್ದಾರೆ.

ಮಹೇಶ್ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ನಡೆಯಿತು. ಅಮರನಾಥ್ ತಾಳೀಕೋಟೆ ಅವರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ.

lokesh

Recent Posts

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

4 mins ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

22 mins ago

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ: ಇಬ್ಬರ ಬಂಧನ

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…

41 mins ago

ವಿಶೇಷ ಚೇತನರಿಗೆ ಗುಡ್‌ನ್ಯೂಸ್‌: ಶಿಕ್ಷಣ ಉದ್ಯೋಗಕ್ಕೆ ಹೊಸ ನೀತಿ

ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ…

43 mins ago

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

2 hours ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

2 hours ago