ಮೈಸೂರು : ಭಾನುವಾರ ರಾತ್ರಿ ನಗರದ ಲಲಿತಮಹಲ್ ಹೋಟೆಲ್ ಸಮೀಪದ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯ ಮೀಸಲು ಪೊಲೀಸ್ ಪಡೆಯ ಇಬ್ಬರು ಪೇದೆಗಳು ಸಾವಿಗೀಡಾಗಿದ್ದಾರೆ.
ರಾಜ್ಯ ಮೀಸಲು ಪೊಲೀಸ್ ಪಡೆಗೆ ಸೇರಿದ ಮೈಸೂರಿನ 5ನೇ ಬಟಾಲಿಯನ್ ನ ಪೇದೆಗಳಾದ ಮೈಸೂರಿನ ಕುಂಬಾರಕೊಪ್ಪಲು ಬಡಾವಣೆ ನಿವಾಸಿ ಪಿ.ಮಹೇಶ್ (23) ಹಾಗೂ ಬಿಜಾಪುರ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅಮರನಾಥ ತಾಳಿಕೋಟೆ (24) ಮೃತಪಟ್ಟವರು.
ನಗರದ ಸಿದ್ದಾರ್ಥ ಬಡಾವಣೆ ಸಮೀಪದ ಫುಡ್ ಸ್ಟ್ರೀಟ್ ನಲ್ಲಿ ಊಟ ಸೇವಿಸಿದ ಬಳಿಕ ತಮ್ಮ ಪಲ್ಸರ್ ಬೈಕಿನಲ್ಲಿ ಕೆಎಸ್ ಆರ್ ಪಿ ಬಟಾಲಿಯನ್ ಕೇಂದ್ರದತ್ತ ತೆರಳುತ್ತಿದ್ದ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಮಹೀಂದ್ರ ಥಾರ್ ವಾಹನ ಪೇದೆಗಳಿದ್ದ ಬೈಕಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಪಲ್ಸರ್ ಬೈಕ್ ಸುಮಾರು ಹತ್ತು ಮೀಟರ್ ದೂರ ಹೋಗಿ ಬಿದ್ದಿದ್ದರೆ, ಇಬ್ಬರೂ ಪೇದೆಗಳು ಮೇಲೆಕ್ಕೆ ಎಗರಿ ನೆಲಕ್ಕೆ ಅಪ್ಪಳಿಸಿದ್ದಾರೆ. ಇದರಿಂದಾಗಿ ಇಬ್ಬರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.
ಘಟನೆ ಬಳಿಕ ಅಪಘಾತ ನಡೆಸಿದ ಮಹೀಂದ್ರ ಥಾರ್ ವಾಹನ ಸವಾರ ತನ್ನ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಅಷ್ಟರಲ್ಲಿ ಎಚ್ಚೆತ್ತುಕೊಂಡ ಸಾರ್ವಜನಿಕರು ಆತನ ವಾಹನ ಬೆನ್ನತ್ತಿ ಆಲನಹಳ್ಳಿ ಸಮೀಪದ ರಿಂಗ್ ರಸ್ತೆ ಬಳಿ ವಾಹನಕ್ಕೆ ಅಡ್ಡಲಾಗಿ ನಿಂತು ತಡೆದು ಆರೋಪಿಯನ್ನು ಹಿಡಿದಿದ್ದಾರೆ.
ನಂತರ ವಿಚಾರ ತಿಳಿದ ಸಿದ್ದಾರ್ಥನಗರ ಸಂಚಾರಿ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ಇಬ್ಬರೂ ಪೇದೆಗಳ ಮರಣೋತ್ತರ ಪರೀಕ್ಷೆ ಸೋಮವಾರ ಬೆಳಗ್ಗೆ ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ನಡೆದ ಬಳಿಕ ಸರ್ಕಾರಿ ಗೌರವ ಸಲ್ಲಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.
ಅಮರನಾಥ ಅವರ ಮೃತದೇಹವನ್ನು ಆಂಬ್ಯುಲೆನ್ಸ್ ಮೂಲಕ ಜಮಖಂಡಿಗೆ ಕಳುಹಿಸಲಾಗಿದ್ದು, ಇದಕ್ಕಾಗಿ ಓರ್ವ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಸಿಬ್ಬಂದಿಯನ್ನು ಕಳುಹಿಸಿಕೊಡಲಾಗಿದೆ ಎಂದು ರಾಜ್ಯ ಮೀಸಲು ಪೊಲೀಸ್ ಪಡೆಗೆ 5ನೇ ಬಟಾಲಿಯನ್ ಕಮಾಂಡೆಂಟ್ ಜನಾರ್ದನ್ ತಿಳಿಸಿದ್ದಾರೆ.
ಮಹೇಶ್ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ನಡೆಯಿತು. ಅಮರನಾಥ್ ತಾಳೀಕೋಟೆ ಅವರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…