ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 70 ಮಂದಿ ಬಲಿಯಾಗಿದ್ದಾರೆ. ನೂರಾರು ಮಂದಿಗೆ ಗಾಯಗಳಾಗಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ.
ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಸಾಧ್ಯತೆ ಇದೆ. ನೇಪಾಳದ ರುಕುಂ ವೆಸ್ಟ್ ಪ್ರದೇಶದಲ್ಲಿ 36 ಮಂದಿ, ಜಾಜರ್ಕೋಟ್ ಪ್ರದೇಶದಲ್ಲಿ 34 ಮಂದಿ ಮೃತಪಟ್ಟಿದ್ದಾರೆ. ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಳ ಆಗುವ ಸಂಭವ ಇದೆ.
ಭಾರತದ ಹಲವು ರಾಜ್ಯಗಳಲ್ಲೂ ಭೂಮಿ ಕಂಪಿಸಿದೆ. ಬಿಹಾರ, ಜಾರ್ಖಂಡ್, ಉತ್ತರಾಖಂಡ್ ಸೇರಿ ಹಲವೆಡೆ ಭೂಮಿ ನಡುಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 1ತಿಂಗಳಲ್ಲಿ 3ನೇ ಬಾರಿಗೆ ಭೂಮಿ ಕಂಪಿಸಿದೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…