ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 70 ಮಂದಿ ಬಲಿಯಾಗಿದ್ದಾರೆ. ನೂರಾರು ಮಂದಿಗೆ ಗಾಯಗಳಾಗಿವೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.4ರಷ್ಟು ದಾಖಲಾಗಿದೆ.
ಕಟ್ಟಡಗಳು ಉರುಳಿದ್ದು, ಮನೆಗಳ ಗೋಡೆಗಳು ಬಿರುಕುಬಿಟ್ಟಿದೆ. ಧರೆಗುರುಳಿದ ಕಟ್ಟಡದ ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಸಾಧ್ಯತೆ ಇದೆ. ನೇಪಾಳದ ರುಕುಂ ವೆಸ್ಟ್ ಪ್ರದೇಶದಲ್ಲಿ 36 ಮಂದಿ, ಜಾಜರ್ಕೋಟ್ ಪ್ರದೇಶದಲ್ಲಿ 34 ಮಂದಿ ಮೃತಪಟ್ಟಿದ್ದಾರೆ. ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಳ ಆಗುವ ಸಂಭವ ಇದೆ.
ಭಾರತದ ಹಲವು ರಾಜ್ಯಗಳಲ್ಲೂ ಭೂಮಿ ಕಂಪಿಸಿದೆ. ಬಿಹಾರ, ಜಾರ್ಖಂಡ್, ಉತ್ತರಾಖಂಡ್ ಸೇರಿ ಹಲವೆಡೆ ಭೂಮಿ ನಡುಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 1ತಿಂಗಳಲ್ಲಿ 3ನೇ ಬಾರಿಗೆ ಭೂಮಿ ಕಂಪಿಸಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…