ಮುಂಬೈ : ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಮಂಗಳವಾರ ವೇಗವಾಗಿ ಬಂದ ಕಂಟೇನರ್ ಟ್ರಕ್ ನಿಂದ ಭಯಾನಕ ಸರಣಿ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು,20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಹೆದ್ದಾರಿಯಲ್ಲಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್, ಬಳಿಕ ಹೋಟೆಲ್ ಒಂದಕ್ಕೂ ನುಗ್ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಎದೆನಡುಗಿಸುವ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಾಜಧಾನಿ ಮುಂಬೈಯಿಂದ ಸುಮಾರು 300 ಕಿಮೀ ದೂರದಲ್ಲಿರುವ ಧುಲೆ ಜಿಲ್ಲೆಯ ಪಲಾಸ್ನೇರ್ ಗ್ರಾಮದ ಸಮೀಪ ಮುಂಬೈ – ಆಗ್ರಾ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಂಟೇನರ್ ಟ್ರಕ್ನ ಬ್ರೇಕ್ ಫೇಲ್ಯೂರ್ ಆಗಿದ್ದು, ಚಾಲಕ ನಿಯಂತ್ರಣ ಕಳೆದುಕೊಂಡಿದ್ದ. ವೇಗವಾಗಿ ಚಲಿಸುತ್ತಿದ್ದ ಟ್ರಕ್ನ ಮುಂಭಾಗವು, ಎರಡು ಬೈಕ್ಗಳು, ಒಂದು ಕಾರು ಹಾಗೂ ಮತ್ತೊಂದು ಟ್ರಕ್ಗೆ ಅಪ್ಪಳಿಸಿದೆ. ಬಳಿಕ ಹೆದ್ದಾರಿಯಲ್ಲಿನ ಬಸ್ ನಿಲ್ದಾಣದ ಸಮೀಪದಲ್ಲಿನ ಹೋಟೆಲ್ಗೆ ಡಿಕ್ಕಿ ಹೊಡೆದಿದೆ. ಆ ರಭಸಕ್ಕೆ ಉರುಳಿ ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಯಮ ಸ್ವರೂಪಿ ಟ್ರಕ್ಗೆ ಬಲಿಯಾದ ಕೆಲವು ಸಂತ್ರಸ್ತರು ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಈ ಟ್ರಕ್ ಮಧ್ಯಪ್ರದೇಶದಿಂದ ಧುಲೆಗೆ ತೆರಳುತ್ತಿತ್ತು. ಅಪಘಾತದ ಬಳಿಕ ಸ್ಥಳದಲ್ಲಿ ಭಾರಿ ದಟ್ಟನೆಯ ದೂಳು ಆವರಿಸಿತ್ತು. ಗಾಯಾಳುಗಳನ್ನು ಸಮೀಪದ ಧಲೆ ಹಾಗೂ ಶಿರ್ಪುರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಅಪಘಾತದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…