BREAKING NEWS

ಭಯೋತ್ಪಾದಕರ ಪ್ರಕರಣ ಸಿಸಿಬಿ ತನಿಖೆಗೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಭಯೋತ್ಪಾದಕರ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್‍ನ ಸದಸ್ಯರ ಗದ್ದಲದ ನಡುವೆಯೂ ಸ್ವಯಂಪ್ರೇರಿತವಾಗಿ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವರು ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನು ಶ್ಲಾಘಿಸಿದರು.

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದ ಪೊಲೀಸರು ಐವರು ಶಂಕಿತರನ್ನು ಬಂಸಿದ್ದಾರೆ.

ಸದರಿ ಆರೋಪಿಗಳು ಹಲವು ದಿನಗಳಿಂದಲೂ ಶಸ್ತ್ರಾಸ್ತ್ರ, ಮದ್ದುಗುಂಡು, ಸಲಕರಣೆ ಸೇರಿದಂತೆ ಹಲವಾರು ವಸ್ತುಗಳನ್ನು ಸಂಗ್ರಹಿಸಿ ದೇಶದ ಐಕ್ಯತೆ, ಸಾರ್ವಭೌಮತ್ವಕ್ಕೆ ಧಕ್ಕೆ ತರುವ ವಿಧ್ವಂಸಕ ಕೃತ್ಯವಾದ ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಸಿದ್ದಾರೆ. ಇವರುಗಳಿಂದ 7 ನಾಡ ಪಿಸ್ತೂಲುಗಳು, 45 ಜೀವಂತ ಗುಂಡು, ವಾಕಿಟಾಕಿ, 12 ಮೊಬೈಲ್ ಸೇರಿದಂತೆ ಹಲವಾರು ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಈ ಆರೋಪಿಗಳು ಜೈಲಿನಲ್ಲಿರುವ ಖೈದಿಗಳ ಜೊತೆ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ಶಾಂತಿ ಸುವ್ಯವಸ್ಥೆಗೆ ಭಂಗ ತರುವಂತ ವಿಧ್ವಂಸಕ ಕೃತ್ಯ ನಡೆಸುವ ಸಂಚಿನಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಹಲವಾರು ಕೊಲೆ, ಸುಲಿಗೆ ಪ್ರಕರಣಗಳಲ್ಲೂ ತೊಡಗಿಸಿಕೊಂಡಿದ್ದರು. ದೇಶದ್ರೋಹಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ ಈ ಆರೋಪಿಗಳನ್ನು ಹೆಬ್ಬಾಳ ಪೆÇಲೀಸ್ ಠಾಣಾ ಪೆÇಲೀಸರು ಬಂಸುವ ಮೂಲಕ ಸಂಭವನೀಯ ದಾಳಿಯನ್ನು ತಡೆದಿದ್ದಾರೆ ಎಂದರು.

ಸದರಿ ಆರೋಪಿಗಳು ನಿಷೇತ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕದಲ್ಲಿರುವುದು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಅನುಸರಿಸಿದ ಮಾರ್ಗಗಳು ಹಾಗೂ ಯಾವ ರೀತಿಯ ವಿಧ್ವಂಸಕ ಕೃತ್ಯವನ್ನು ನಡೆಸಲು ಸಂಚು ರೂಪಿಸಿದ್ದರು ಎಂಬ ವಿಚಾರಗಳ ತನಿಖೆಗೆ ಪ್ರಕರಣವನ್ನು ಸಿಸಿಬಿ ತನಿಖೆಗೆ ಒಪ್ಪಿಸಿರುವುದಾಗಿ ತಿಳಿಸಿದರು.

andolanait

Recent Posts

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

2 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

3 hours ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

6 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

7 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

12 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

12 hours ago