BREAKING NEWS

ಭಯೋತ್ಪಾದಕರ ಪ್ರಕರಣ ಸಿಸಿಬಿ ತನಿಖೆಗೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಭಯೋತ್ಪಾದಕರ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್‍ನ ಸದಸ್ಯರ ಗದ್ದಲದ ನಡುವೆಯೂ ಸ್ವಯಂಪ್ರೇರಿತವಾಗಿ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವರು ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನು ಶ್ಲಾಘಿಸಿದರು.

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದ ಪೊಲೀಸರು ಐವರು ಶಂಕಿತರನ್ನು ಬಂಸಿದ್ದಾರೆ.

ಸದರಿ ಆರೋಪಿಗಳು ಹಲವು ದಿನಗಳಿಂದಲೂ ಶಸ್ತ್ರಾಸ್ತ್ರ, ಮದ್ದುಗುಂಡು, ಸಲಕರಣೆ ಸೇರಿದಂತೆ ಹಲವಾರು ವಸ್ತುಗಳನ್ನು ಸಂಗ್ರಹಿಸಿ ದೇಶದ ಐಕ್ಯತೆ, ಸಾರ್ವಭೌಮತ್ವಕ್ಕೆ ಧಕ್ಕೆ ತರುವ ವಿಧ್ವಂಸಕ ಕೃತ್ಯವಾದ ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಸಿದ್ದಾರೆ. ಇವರುಗಳಿಂದ 7 ನಾಡ ಪಿಸ್ತೂಲುಗಳು, 45 ಜೀವಂತ ಗುಂಡು, ವಾಕಿಟಾಕಿ, 12 ಮೊಬೈಲ್ ಸೇರಿದಂತೆ ಹಲವಾರು ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಈ ಆರೋಪಿಗಳು ಜೈಲಿನಲ್ಲಿರುವ ಖೈದಿಗಳ ಜೊತೆ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ಶಾಂತಿ ಸುವ್ಯವಸ್ಥೆಗೆ ಭಂಗ ತರುವಂತ ವಿಧ್ವಂಸಕ ಕೃತ್ಯ ನಡೆಸುವ ಸಂಚಿನಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಹಲವಾರು ಕೊಲೆ, ಸುಲಿಗೆ ಪ್ರಕರಣಗಳಲ್ಲೂ ತೊಡಗಿಸಿಕೊಂಡಿದ್ದರು. ದೇಶದ್ರೋಹಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ ಈ ಆರೋಪಿಗಳನ್ನು ಹೆಬ್ಬಾಳ ಪೆÇಲೀಸ್ ಠಾಣಾ ಪೆÇಲೀಸರು ಬಂಸುವ ಮೂಲಕ ಸಂಭವನೀಯ ದಾಳಿಯನ್ನು ತಡೆದಿದ್ದಾರೆ ಎಂದರು.

ಸದರಿ ಆರೋಪಿಗಳು ನಿಷೇತ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕದಲ್ಲಿರುವುದು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಅನುಸರಿಸಿದ ಮಾರ್ಗಗಳು ಹಾಗೂ ಯಾವ ರೀತಿಯ ವಿಧ್ವಂಸಕ ಕೃತ್ಯವನ್ನು ನಡೆಸಲು ಸಂಚು ರೂಪಿಸಿದ್ದರು ಎಂಬ ವಿಚಾರಗಳ ತನಿಖೆಗೆ ಪ್ರಕರಣವನ್ನು ಸಿಸಿಬಿ ತನಿಖೆಗೆ ಒಪ್ಪಿಸಿರುವುದಾಗಿ ತಿಳಿಸಿದರು.

andolanait

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

3 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

4 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

4 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

5 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

5 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

6 hours ago