BREAKING NEWS

ಉಗ್ರ ಯಾಸಿನ್ ಮಲಿಕ್​​ ಹಾಜರಿ: ತಿಹಾರ್ ಜೈಲಿನ ನಾಲ್ವರು ಸಿಬ್ಬಂದಿ ಅಮಾನತು

ದೆಹಲಿ : ಜೈಲಿನಲ್ಲಿರುವ ಹುರಿಯತ್ ನಾಯಕ ಯಾಸಿನ್‌ ಮಲ್ಲಿಕ್‌ನ್ನು ಸುಪ್ರೀಂಕೋರ್ಟ್‌ನಲ್ಲಿ ಖುದ್ದಾಗಿ ಹಾಜರುಪಡಿಸಿದ ಒಂದು ದಿನದ ನಂತರ ತಿಹಾರ್ ಕೇಂದ್ರ ಕಾರಾಗೃಹದ ಜೈಲು ಸಂಖ್ಯೆ 7 ರ ಒಬ್ಬ ಉಪ ಅಧೀಕ್ಷಕರು, ಇಬ್ಬರು ಸಹಾಯಕ ಸೂಪರಿಂಟೆಂಡೆಂಟ್‌ಗಳು ಮತ್ತು ಒಬ್ಬ ಮುಖ್ಯ ವಾರ್ಡರ್ ಸೇರಿದಂತೆ ನಾಲ್ವರು ಸಿಬ್ಬಂದಿಗಳನ್ನು ದೆಹಲಿ ಕಾರಾಗೃಹ ಅಧಿಕಾರಿಗಳು ಶನಿವಾರ ಅಮಾನತುಗೊಳಿಸಿದ್ದಾರೆ.

ಗಂಭೀರ ಭದ್ರತಾ ಲೋಪವನ್ನು ಉಲ್ಲೇಖಿಸಿ ಇವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಈ ವಿಷಯದ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಿರುವ ಡೈರೆಕ್ಟರ್ ಜನರಲ್ (ಜೈಲು) ಸಂಜಯ್ ಬನಿವಾಲ್, ಮೇಲ್ನೋಟಕ್ಕೆ ಈ ನಾಲ್ವರು ಅಧಿಕಾರಿಗಳು ಮಲಿಕ್​​ನ್ನು ಉನ್ನತ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿಸಲು ಜವಾಬ್ದಾರರು ಎಂದು ಕಂಡುಬಂದಿದೆ ಎಂದು ಹೇಳಿದರು.

“ತಪ್ಪು ಮಾಡಿದ ಅಧಿಕಾರಿಗಳ ಜವಾಬ್ದಾರಿಯನ್ನು ಸರಿಪಡಿಸಲು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಜೈಲು ಪ್ರಧಾನ ಕಛೇರಿ) ರಾಜೀವ್ ಸಿಂಗ್ ಅವರು ಈ ವಿಷಯದಲ್ಲಿ ವಿವರವಾದ ತನಿಖೆಯನ್ನು ನಡೆಸುವಂತೆ ನಾನು ಈಗಾಗಲೇ ಆದೇಶಿಸಿದ್ದೇನೆ. ಜೈಲು ಅಧಿಕಾರಿಗಳ ಕಡೆಯಿಂದ ಗಂಭೀರ ಲೋಪವಾಗಿರುವುದರಿಂದ ಸೋಮವಾರದೊಳಗೆ ಈ ಸಂಬಂಧ ತಮ್ಮ ವರದಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಬನಿವಾಲ್ ಹೇಳಿದ್ದಾರೆ.

ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತ್ರ ಮಲಿಕ್‌ನನ್ನು ಹಾಜರುಪಬಡಿಸಲು ಸ್ಪಷ್ಟವಾದ ಸೂಚನೆ ಇದೆ. ಇದರ ಬದಲಾಗಿ, ಮಲಿಕ್ ನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರುಪಡಿಸಲಾಯಿತು. ಇದು ಖಂಡಿತವಾಗಿಯೂ ನಮ್ಮ ಕಡೆಯಿಂದ ಘೋರ ಲೋಪವಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬನಿವಾಲ್ ಹೇಳಿದ್ದಾರೆ.

ಭಯೋತ್ಪಾದಕನನ್ನು ಖುದ್ದಾಗಿ ಹಾಜರು ಮಾಡುವುದಕ್ಕೆ ನಿರ್ಬಂಧವಿದೆ. ಆದರೆ ಭಯೋತ್ಪಾದಕ ನಿಧಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಲಿಕ್ ಶುಕ್ರವಾರ ಪೊಲೀಸ್ ಬೆಂಗಾವಲಿನಲ್ಲಿ ಸುಪ್ರೀಂಕೋರ್ಟ್‌ಗೆ ಹಾಜರಾಗಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರಿಗೆ ಬರೆದ ಪತ್ರದಲ್ಲಿ “ದೊಡ್ಡ ಭದ್ರತಾ ಲೋಪ” ಎಂದು ಹೇಳಿದ್ದಾರೆ.

ಯಾವುದೇ ಆದೇಶ ಅಥವಾ ನ್ಯಾಯಾಲಯದ ಅಧಿಕಾರ ಇಲ್ಲದೆ, ಪ್ರತ್ಯೇಕತಾವಾದಿ ನಾಯಕನನ್ನು ಹೊರತರಲು ಹೇಗೆ ಅವಕಾಶ ನೀಡಲಾಯಿತು ಎಂದು ಮೆಹ್ತಾ ಕೇಳಿದ್ದು, ಜೈಲು  ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

andolanait

Recent Posts

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

12 mins ago

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…

25 mins ago

ಹನೂರು| ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳ ವಿರುದ್ಧ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…

57 mins ago

ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ…

1 hour ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…

2 hours ago

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

3 hours ago