ದೆಹಲಿ : ಜೈಲಿನಲ್ಲಿರುವ ಹುರಿಯತ್ ನಾಯಕ ಯಾಸಿನ್ ಮಲ್ಲಿಕ್ನ್ನು ಸುಪ್ರೀಂಕೋರ್ಟ್ನಲ್ಲಿ ಖುದ್ದಾಗಿ ಹಾಜರುಪಡಿಸಿದ ಒಂದು ದಿನದ ನಂತರ ತಿಹಾರ್ ಕೇಂದ್ರ ಕಾರಾಗೃಹದ ಜೈಲು ಸಂಖ್ಯೆ 7 ರ ಒಬ್ಬ ಉಪ ಅಧೀಕ್ಷಕರು, ಇಬ್ಬರು ಸಹಾಯಕ ಸೂಪರಿಂಟೆಂಡೆಂಟ್ಗಳು ಮತ್ತು ಒಬ್ಬ ಮುಖ್ಯ ವಾರ್ಡರ್ ಸೇರಿದಂತೆ ನಾಲ್ವರು ಸಿಬ್ಬಂದಿಗಳನ್ನು ದೆಹಲಿ ಕಾರಾಗೃಹ ಅಧಿಕಾರಿಗಳು ಶನಿವಾರ ಅಮಾನತುಗೊಳಿಸಿದ್ದಾರೆ.
ಗಂಭೀರ ಭದ್ರತಾ ಲೋಪವನ್ನು ಉಲ್ಲೇಖಿಸಿ ಇವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.
ಈ ವಿಷಯದ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಿರುವ ಡೈರೆಕ್ಟರ್ ಜನರಲ್ (ಜೈಲು) ಸಂಜಯ್ ಬನಿವಾಲ್, ಮೇಲ್ನೋಟಕ್ಕೆ ಈ ನಾಲ್ವರು ಅಧಿಕಾರಿಗಳು ಮಲಿಕ್ನ್ನು ಉನ್ನತ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿಸಲು ಜವಾಬ್ದಾರರು ಎಂದು ಕಂಡುಬಂದಿದೆ ಎಂದು ಹೇಳಿದರು.
“ತಪ್ಪು ಮಾಡಿದ ಅಧಿಕಾರಿಗಳ ಜವಾಬ್ದಾರಿಯನ್ನು ಸರಿಪಡಿಸಲು ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ (ಜೈಲು ಪ್ರಧಾನ ಕಛೇರಿ) ರಾಜೀವ್ ಸಿಂಗ್ ಅವರು ಈ ವಿಷಯದಲ್ಲಿ ವಿವರವಾದ ತನಿಖೆಯನ್ನು ನಡೆಸುವಂತೆ ನಾನು ಈಗಾಗಲೇ ಆದೇಶಿಸಿದ್ದೇನೆ. ಜೈಲು ಅಧಿಕಾರಿಗಳ ಕಡೆಯಿಂದ ಗಂಭೀರ ಲೋಪವಾಗಿರುವುದರಿಂದ ಸೋಮವಾರದೊಳಗೆ ಈ ಸಂಬಂಧ ತಮ್ಮ ವರದಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಬನಿವಾಲ್ ಹೇಳಿದ್ದಾರೆ.
ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತ್ರ ಮಲಿಕ್ನನ್ನು ಹಾಜರುಪಬಡಿಸಲು ಸ್ಪಷ್ಟವಾದ ಸೂಚನೆ ಇದೆ. ಇದರ ಬದಲಾಗಿ, ಮಲಿಕ್ ನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರುಪಡಿಸಲಾಯಿತು. ಇದು ಖಂಡಿತವಾಗಿಯೂ ನಮ್ಮ ಕಡೆಯಿಂದ ಘೋರ ಲೋಪವಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬನಿವಾಲ್ ಹೇಳಿದ್ದಾರೆ.
ಭಯೋತ್ಪಾದಕನನ್ನು ಖುದ್ದಾಗಿ ಹಾಜರು ಮಾಡುವುದಕ್ಕೆ ನಿರ್ಬಂಧವಿದೆ. ಆದರೆ ಭಯೋತ್ಪಾದಕ ನಿಧಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಲಿಕ್ ಶುಕ್ರವಾರ ಪೊಲೀಸ್ ಬೆಂಗಾವಲಿನಲ್ಲಿ ಸುಪ್ರೀಂಕೋರ್ಟ್ಗೆ ಹಾಜರಾಗಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರಿಗೆ ಬರೆದ ಪತ್ರದಲ್ಲಿ “ದೊಡ್ಡ ಭದ್ರತಾ ಲೋಪ” ಎಂದು ಹೇಳಿದ್ದಾರೆ.
ಯಾವುದೇ ಆದೇಶ ಅಥವಾ ನ್ಯಾಯಾಲಯದ ಅಧಿಕಾರ ಇಲ್ಲದೆ, ಪ್ರತ್ಯೇಕತಾವಾದಿ ನಾಯಕನನ್ನು ಹೊರತರಲು ಹೇಗೆ ಅವಕಾಶ ನೀಡಲಾಯಿತು ಎಂದು ಮೆಹ್ತಾ ಕೇಳಿದ್ದು, ಜೈಲು ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…