BREAKING NEWS

ಉಗ್ರ ಯಾಸಿನ್ ಮಲಿಕ್​​ ಹಾಜರಿ: ತಿಹಾರ್ ಜೈಲಿನ ನಾಲ್ವರು ಸಿಬ್ಬಂದಿ ಅಮಾನತು

ದೆಹಲಿ : ಜೈಲಿನಲ್ಲಿರುವ ಹುರಿಯತ್ ನಾಯಕ ಯಾಸಿನ್‌ ಮಲ್ಲಿಕ್‌ನ್ನು ಸುಪ್ರೀಂಕೋರ್ಟ್‌ನಲ್ಲಿ ಖುದ್ದಾಗಿ ಹಾಜರುಪಡಿಸಿದ ಒಂದು ದಿನದ ನಂತರ ತಿಹಾರ್ ಕೇಂದ್ರ ಕಾರಾಗೃಹದ ಜೈಲು ಸಂಖ್ಯೆ 7 ರ ಒಬ್ಬ ಉಪ ಅಧೀಕ್ಷಕರು, ಇಬ್ಬರು ಸಹಾಯಕ ಸೂಪರಿಂಟೆಂಡೆಂಟ್‌ಗಳು ಮತ್ತು ಒಬ್ಬ ಮುಖ್ಯ ವಾರ್ಡರ್ ಸೇರಿದಂತೆ ನಾಲ್ವರು ಸಿಬ್ಬಂದಿಗಳನ್ನು ದೆಹಲಿ ಕಾರಾಗೃಹ ಅಧಿಕಾರಿಗಳು ಶನಿವಾರ ಅಮಾನತುಗೊಳಿಸಿದ್ದಾರೆ.

ಗಂಭೀರ ಭದ್ರತಾ ಲೋಪವನ್ನು ಉಲ್ಲೇಖಿಸಿ ಇವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಈ ವಿಷಯದ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಿರುವ ಡೈರೆಕ್ಟರ್ ಜನರಲ್ (ಜೈಲು) ಸಂಜಯ್ ಬನಿವಾಲ್, ಮೇಲ್ನೋಟಕ್ಕೆ ಈ ನಾಲ್ವರು ಅಧಿಕಾರಿಗಳು ಮಲಿಕ್​​ನ್ನು ಉನ್ನತ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿಸಲು ಜವಾಬ್ದಾರರು ಎಂದು ಕಂಡುಬಂದಿದೆ ಎಂದು ಹೇಳಿದರು.

“ತಪ್ಪು ಮಾಡಿದ ಅಧಿಕಾರಿಗಳ ಜವಾಬ್ದಾರಿಯನ್ನು ಸರಿಪಡಿಸಲು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಜೈಲು ಪ್ರಧಾನ ಕಛೇರಿ) ರಾಜೀವ್ ಸಿಂಗ್ ಅವರು ಈ ವಿಷಯದಲ್ಲಿ ವಿವರವಾದ ತನಿಖೆಯನ್ನು ನಡೆಸುವಂತೆ ನಾನು ಈಗಾಗಲೇ ಆದೇಶಿಸಿದ್ದೇನೆ. ಜೈಲು ಅಧಿಕಾರಿಗಳ ಕಡೆಯಿಂದ ಗಂಭೀರ ಲೋಪವಾಗಿರುವುದರಿಂದ ಸೋಮವಾರದೊಳಗೆ ಈ ಸಂಬಂಧ ತಮ್ಮ ವರದಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಬನಿವಾಲ್ ಹೇಳಿದ್ದಾರೆ.

ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತ್ರ ಮಲಿಕ್‌ನನ್ನು ಹಾಜರುಪಬಡಿಸಲು ಸ್ಪಷ್ಟವಾದ ಸೂಚನೆ ಇದೆ. ಇದರ ಬದಲಾಗಿ, ಮಲಿಕ್ ನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರುಪಡಿಸಲಾಯಿತು. ಇದು ಖಂಡಿತವಾಗಿಯೂ ನಮ್ಮ ಕಡೆಯಿಂದ ಘೋರ ಲೋಪವಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬನಿವಾಲ್ ಹೇಳಿದ್ದಾರೆ.

ಭಯೋತ್ಪಾದಕನನ್ನು ಖುದ್ದಾಗಿ ಹಾಜರು ಮಾಡುವುದಕ್ಕೆ ನಿರ್ಬಂಧವಿದೆ. ಆದರೆ ಭಯೋತ್ಪಾದಕ ನಿಧಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಲಿಕ್ ಶುಕ್ರವಾರ ಪೊಲೀಸ್ ಬೆಂಗಾವಲಿನಲ್ಲಿ ಸುಪ್ರೀಂಕೋರ್ಟ್‌ಗೆ ಹಾಜರಾಗಿದ್ದು, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರಿಗೆ ಬರೆದ ಪತ್ರದಲ್ಲಿ “ದೊಡ್ಡ ಭದ್ರತಾ ಲೋಪ” ಎಂದು ಹೇಳಿದ್ದಾರೆ.

ಯಾವುದೇ ಆದೇಶ ಅಥವಾ ನ್ಯಾಯಾಲಯದ ಅಧಿಕಾರ ಇಲ್ಲದೆ, ಪ್ರತ್ಯೇಕತಾವಾದಿ ನಾಯಕನನ್ನು ಹೊರತರಲು ಹೇಗೆ ಅವಕಾಶ ನೀಡಲಾಯಿತು ಎಂದು ಮೆಹ್ತಾ ಕೇಳಿದ್ದು, ಜೈಲು  ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

8 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

8 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

8 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

8 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

20 hours ago