BREAKING NEWS

ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಕಳೆದ ಎರಡು ವರ್ಷಗಳಿಂದಲೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಆರೋಪಿ ಶಿವಾಜಿರಾವ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯಕ್, ವಸುಂಧರಾ ಭೂಪತಿ ಸೇರಿದಂತೆ 7 ಕ್ಕೂ ಹೆಚ್ಚು ಸಾಹಿತಿಗಳಿಗೆ ಪದೇಪದೇ ಜೀವಬೆದರಿಕೆಯ ಪತ್ರಗಳು ಬರುತ್ತಿದ್ದವು. ಈ ಬಗ್ಗೆ ಚಿತ್ರದುರ್ಗ, ಕೊಟ್ಟೂರು, ಸಂಜಯನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು, ಹಾರೋಹಳ್ಳಿ, ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿ ಒಟ್ಟು 7 ಪ್ರಕರಗಣಗಳು ದಾಖಲಾಗಿದ್ದವು.

ಈ ಹಿಂದೆ ರಾಜ್ಯದಲ್ಲಿ ಸಾಹಿತಿ ಎಂ.ಎಂ.ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಸಾಹಿತಿಗಳಿಗೆ ಬರುತ್ತಿರುವ ಬೆದರಿಕೆ ಪತ್ರ ಆತಂಕ ಮೂಡಿಸಿತ್ತು. ಖುದ್ದು ಮುಖ್ಯಮಂತ್ರಿ, ಗೃಹಸಚಿವರುಗಳೇ ಸಾಹಿತಿಗಳೊಂದಿಗೆ ಸಭೆ ನಡೆಸಿ ಸಮಾಲೋಚಿಸಿದ್ದರು. ಪ್ರಕರಣವನ್ನು ಕಳೆದ ತಿಂಗಳು ಸಿಸಿಬಿ ತನಿಖೆಗೆ ವಹಿಸಲಾಗಿತ್ತು.

ಪತ್ರದ ಹಸ್ತಾಕ್ಷರ ಹಾಗೂ ಪೊಸ್ಟ್ ಮಾಡಲಾಗಿದ್ದ ಸ್ಥಳಗಳ ಜಾಡು ಹಿಡಿದ ಸಿಸಿಬಿ ಪೊಲೀಸರು ಸೆ.28 ರಂದು ಆರೋಪಿಯನ್ನು ದಾವಣಗೆರೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಪ್ರಕರಣಗಳಲ್ಲಷ್ಟೇ ಅಲ್ಲದೆ, ಆರೋಪಿ ವಿರುದ್ಧ ಈ ಮೊದಲು ಎರಡು ಪ್ರಕರಣಗಳು ದಾಖಲಾಗಿದ್ದ ಮಾಹಿತಿ ಇದೆ.

7 ಮಂದಿಯ ಜೊತೆಗೆ ಇನ್ನೂ ಹಲವು ಸಾಹಿತಿಗಳಿಗೆ ಆರೋಪಿ ಬೆದರಿಕೆ ಪತ್ರ ಬರೆದಿರುವ ಬಗ್ಗೆ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈತ ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಎಂದು ಹೇಳಲಾಗಿದೆ.

ಬೆದರಿಕೆ ಪತ್ರ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ-ಸಿಎಂ ಸಿದ್ದರಾಮಯ್ಯ

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿ ಬಂಧಿಸಲಾಗಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಫೇಸ್​ಬುಕ್ ಪೋಸ್ಟ್ ಮಾಡಿದ್ದಾರೆ.

ನಾಡಿನ ಹಿರಿಯ ಸಾಹಿತಿಗಳು, ಬರಹಗಾರರು, ರಾಜಕೀಯ ನಾಯಕರು, ಧರ್ಮ ಗುರುಗಳಿಗೆ ಪತ್ರಗಳ ಮೂಲಕ ಜೀವ ಬೆದರಿಕೆ ಒಡ್ಡುತ್ತಿದ್ದ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ ಎಂಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.

ಆರೋಪಿಯ ಜೊತೆ ಯಾವುದೇ ಸಂಘಟನೆ ಅಥವಾ ವ್ಯಕ್ತಿಗಳು ಶಾಮೀಲಾಗಿದ್ದರೂ ಅವರನ್ನು ಪತ್ತೆಹಚ್ಚಿ ಕಾನೂನಿನ ಕೈಗಳಿಗೆ ಒಪ್ಪಿಸುವ ಮೂಲಕ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ.

ನಾಡಿನ ಪ್ರತಿ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ನಮ್ಮ ಸರ್ಕಾರ ಬದ್ಧವಿದೆ. ಸಮಾಜಮುಖಿ ಧ್ವನಿ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು ‘ಜೀರೊ ಟಾಲರೆನ್ಸ್’ ಎಂದು ತಿಳಿಸಿದ್ದಾರೆ

andolanait

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

2 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

2 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

2 hours ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

2 hours ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

3 hours ago