BREAKING NEWS

ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಕಳೆದ ಎರಡು ವರ್ಷಗಳಿಂದಲೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಆರೋಪಿ ಶಿವಾಜಿರಾವ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯಕ್, ವಸುಂಧರಾ ಭೂಪತಿ ಸೇರಿದಂತೆ 7 ಕ್ಕೂ ಹೆಚ್ಚು ಸಾಹಿತಿಗಳಿಗೆ ಪದೇಪದೇ ಜೀವಬೆದರಿಕೆಯ ಪತ್ರಗಳು ಬರುತ್ತಿದ್ದವು. ಈ ಬಗ್ಗೆ ಚಿತ್ರದುರ್ಗ, ಕೊಟ್ಟೂರು, ಸಂಜಯನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು, ಹಾರೋಹಳ್ಳಿ, ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿ ಒಟ್ಟು 7 ಪ್ರಕರಗಣಗಳು ದಾಖಲಾಗಿದ್ದವು.

ಈ ಹಿಂದೆ ರಾಜ್ಯದಲ್ಲಿ ಸಾಹಿತಿ ಎಂ.ಎಂ.ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಸಾಹಿತಿಗಳಿಗೆ ಬರುತ್ತಿರುವ ಬೆದರಿಕೆ ಪತ್ರ ಆತಂಕ ಮೂಡಿಸಿತ್ತು. ಖುದ್ದು ಮುಖ್ಯಮಂತ್ರಿ, ಗೃಹಸಚಿವರುಗಳೇ ಸಾಹಿತಿಗಳೊಂದಿಗೆ ಸಭೆ ನಡೆಸಿ ಸಮಾಲೋಚಿಸಿದ್ದರು. ಪ್ರಕರಣವನ್ನು ಕಳೆದ ತಿಂಗಳು ಸಿಸಿಬಿ ತನಿಖೆಗೆ ವಹಿಸಲಾಗಿತ್ತು.

ಪತ್ರದ ಹಸ್ತಾಕ್ಷರ ಹಾಗೂ ಪೊಸ್ಟ್ ಮಾಡಲಾಗಿದ್ದ ಸ್ಥಳಗಳ ಜಾಡು ಹಿಡಿದ ಸಿಸಿಬಿ ಪೊಲೀಸರು ಸೆ.28 ರಂದು ಆರೋಪಿಯನ್ನು ದಾವಣಗೆರೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಪ್ರಕರಣಗಳಲ್ಲಷ್ಟೇ ಅಲ್ಲದೆ, ಆರೋಪಿ ವಿರುದ್ಧ ಈ ಮೊದಲು ಎರಡು ಪ್ರಕರಣಗಳು ದಾಖಲಾಗಿದ್ದ ಮಾಹಿತಿ ಇದೆ.

7 ಮಂದಿಯ ಜೊತೆಗೆ ಇನ್ನೂ ಹಲವು ಸಾಹಿತಿಗಳಿಗೆ ಆರೋಪಿ ಬೆದರಿಕೆ ಪತ್ರ ಬರೆದಿರುವ ಬಗ್ಗೆ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈತ ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಎಂದು ಹೇಳಲಾಗಿದೆ.

ಬೆದರಿಕೆ ಪತ್ರ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ-ಸಿಎಂ ಸಿದ್ದರಾಮಯ್ಯ

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿ ಬಂಧಿಸಲಾಗಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಫೇಸ್​ಬುಕ್ ಪೋಸ್ಟ್ ಮಾಡಿದ್ದಾರೆ.

ನಾಡಿನ ಹಿರಿಯ ಸಾಹಿತಿಗಳು, ಬರಹಗಾರರು, ರಾಜಕೀಯ ನಾಯಕರು, ಧರ್ಮ ಗುರುಗಳಿಗೆ ಪತ್ರಗಳ ಮೂಲಕ ಜೀವ ಬೆದರಿಕೆ ಒಡ್ಡುತ್ತಿದ್ದ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ ಎಂಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.

ಆರೋಪಿಯ ಜೊತೆ ಯಾವುದೇ ಸಂಘಟನೆ ಅಥವಾ ವ್ಯಕ್ತಿಗಳು ಶಾಮೀಲಾಗಿದ್ದರೂ ಅವರನ್ನು ಪತ್ತೆಹಚ್ಚಿ ಕಾನೂನಿನ ಕೈಗಳಿಗೆ ಒಪ್ಪಿಸುವ ಮೂಲಕ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ.

ನಾಡಿನ ಪ್ರತಿ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ನಮ್ಮ ಸರ್ಕಾರ ಬದ್ಧವಿದೆ. ಸಮಾಜಮುಖಿ ಧ್ವನಿ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು ‘ಜೀರೊ ಟಾಲರೆನ್ಸ್’ ಎಂದು ತಿಳಿಸಿದ್ದಾರೆ

andolanait

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

13 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

13 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

14 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

15 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

15 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

16 hours ago