ಅಥಣಿ (ಬೆಳಗಾವಿ ಜಿಲ್ಲೆ): ಪಕ್ಷ ಬಿಡದಂತೆ ಲಕ್ಷ್ಮಣ ಸವದಿ ಅವರ ಮನವೊಲಿಸಲು ಇಲ್ಲಿಗೆ ಗುರುವಾರ ಬಂದಿದ್ದ ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ನೇರ್ಲಿ ಹಾಗೂ ಆರ್.ಎಸ್.ಎಸ್. ಮುಖಂಡರಿಗೆ ಸವದಿ ಬೆಂಬಲಿಗರು ಮುತ್ತಿಗೆ ಹಾಕಿ, ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು.
ಮತ್ತೆ ಕೆಲವರು ನೇರ್ಲಿ ಅವರ ಕಾರಿಗೆ ಗುದ್ದಿ ಕಿಡಿ ಕಾರಿದರು. ‘ನಮ್ಮ ಸಾಹುಕಾರಗೆ ಯಾಕೆ ಟಿಕಟ್ ತಪ್ಪಿಸಿದ್ದೀರಿ ಎಂದು ಉತ್ತರ ಕೊಟ್ಟೇ ಹೋಗಬೇಕು’ ಎಂದು ಪಟ್ಟು ಹಿಡಿದರು.
‘ಈ ಜಿಲ್ಲಾಧ್ಯಕ್ಷ ಸಂಧಾನಕ್ಕೆ ಬಂದಿದ್ದಾರೆ. ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷರಾದ ಸವದಿ ಅವರಿಗೆ ಬಿಜೆಪಿ ವರರಿಷ್ಠರು ಬೆಲೆ ಕೊಟ್ಟಿಲ್ಲ. ಇವರು ಯಾವ ಲೆಕ್ಕ’ ಎಂದೂ ಕೆಲವರು ಲೇವಡಿ ಮಾಡಿದರು.
‘ನಾವು, ನಮ್ಮ ಸಾಹುಕಾರು ಸ್ವಂತ ಸಾಮರ್ಥ್ಯದ ಮೇಲೆ ಗೆದ್ದವರು. ಬಿಜೆಪಿ ಉಪಕಾರವೇನೂ ಮಾಡಿಲ್ಲ. ಹಾಗಿದ್ದ ಮೇಲೆ ಬಿಜೆಪಿ ಪರ ನಾವೇಕೆ ಕೆಲಸ ಮಾಡಬೇಕು. ಇನ್ನು ಮುಂದೆ ಕೂಡ ಸವದಿ ಅವರನ್ನು ಹೆಚ್ಚು ಲೀಡ್ನಿಂದ ಗೆಲ್ಲಿಸುತ್ತೇವೆ. ಟಿಕೆಟ್ ತಪ್ಪಿಸುವ ಹುನ್ನಾರ ಮಾಡಿದ ನಿಮಂಥವರಿಗೆ ಬುದ್ಧಿ ಕಲಿಸುತ್ತೇವೆ’ ಎಂದು ಕೆಲ ಗ್ರಾಮ ಪಂಚಾಯಿತಿ ಸದಸ್ಯರೂ ಕಿಡಿ ಕಾರಿದರು.
ಜನರ ಆಕ್ರೋಶಕ್ಕೆ ಉತ್ತರ ಕೊಡಲಾಗದೇ ನೇರ್ಲಿ ಕೆಲಹೊತ್ತು ಸುಮ್ಮನೇ ಕುಳಿತರು. ಏನೂ ಪ್ರತಿಕ್ರಿಯಿಸದೇ ಸವದಿ ಅವರ ಮನೆಯಿಂದ ಹೊರಡಲು ಸಿದ್ಧರಾದರು. ಅವರನ್ನು ಹೊರಗೆ ಬಿಡದ ಜನ, ಉತ್ತರ ಕೊಟ್ಟೇ ಹೋಗಬೇಕು ಎಂದು ಎಳೆದಾಡಿದರು.
ಸ್ಥಳದಲ್ಲಿದ್ದ ಲಕ್ಷ್ಮಣ ಸವದಿ ಜನರನ್ನು ಸಮಾಧಾನಪಡಿಸಲು ಯತ್ನಿಸಿದರು. ಗಲಾಟೆ ಹೆಚ್ಚಾಗುವ ಪರಿಸ್ಥಿತಿ ತಲೆದೋರಿಂದ ಸವದಿ ಅವರೇ ನೇರ್ಲಿ ಅವರನ್ನು ಕೈ ಹಿಡಿದುಕೊಂಡು ಬಂದು ಕಾರಿನೊಳಗೆ ಹತ್ತಿಸಿದರು.
ಅಷ್ಟರೊಳಗೆ ಕಾರ್ ಸುತ್ತುವರಿದ ಜನ ಧಿಕ್ಕಾರ ಕೂಗಿದರು. ಅವಾಚ್ಯ ಪದಗಳಿಂದ ನಿಂದಿಸಿದರು. ಕಾರಿನ ಬಾಗಿಲಿಗೆ ಗುದ್ದಿದರು. ಸ್ಥಳಕ್ಕೆ ಬಂದ ಸವದಿ ಅವರ ಪುತ್ರರು ಜನರನ್ನು ಚದುರಿಸಿ ಕಾರಿಗೆ ದಾರಿ ಮಾಡಿಕೊಟ್ಟರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…