BREAKING NEWS

ಸವದಿ ಮನವೊಲಿಸಲು ಬಂದ ಬಿಜೆಪಿ ಮುಖಂಡನ ಎಳೆದಾಡಿ, ಕಾರಿಗೆ ಗುದ್ದಿದ ಕಾರ್ಯಕರ್ತರು

ಅಥಣಿ (ಬೆಳಗಾವಿ ಜಿಲ್ಲೆ): ಪಕ್ಷ ಬಿಡದಂತೆ ಲಕ್ಷ್ಮಣ ಸವದಿ ಅವರ ಮನವೊಲಿಸಲು ಇಲ್ಲಿಗೆ ಗುರುವಾರ ಬಂದಿದ್ದ ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ನೇರ್ಲಿ ಹಾಗೂ ಆರ್.ಎಸ್.ಎಸ್. ಮುಖಂಡರಿಗೆ ಸವದಿ ಬೆಂಬಲಿಗರು ಮುತ್ತಿಗೆ ಹಾಕಿ, ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು.

ಮತ್ತೆ ಕೆಲವರು ನೇರ್ಲಿ ಅವರ ಕಾರಿಗೆ ಗುದ್ದಿ ಕಿಡಿ ಕಾರಿದರು. ‘ನಮ್ಮ ಸಾಹುಕಾರಗೆ ಯಾಕೆ ಟಿಕಟ್ ತಪ್ಪಿಸಿದ್ದೀರಿ ಎಂದು ಉತ್ತರ ಕೊಟ್ಟೇ ಹೋಗಬೇಕು’ ಎಂದು ಪಟ್ಟು ಹಿಡಿದರು.

‘ಈ ಜಿಲ್ಲಾಧ್ಯಕ್ಷ ಸಂಧಾನಕ್ಕೆ ಬಂದಿದ್ದಾರೆ. ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷರಾದ ಸವದಿ ಅವರಿಗೆ ಬಿಜೆಪಿ ವರರಿಷ್ಠರು ಬೆಲೆ ಕೊಟ್ಟಿಲ್ಲ. ಇವರು ಯಾವ ಲೆಕ್ಕ’ ಎಂದೂ ಕೆಲವರು ಲೇವಡಿ ಮಾಡಿದರು.

‘ನಾವು, ನಮ್ಮ ಸಾಹುಕಾರು ಸ್ವಂತ ಸಾಮರ್ಥ್ಯದ ಮೇಲೆ ಗೆದ್ದವರು. ಬಿಜೆಪಿ ಉಪಕಾರವೇನೂ ಮಾಡಿಲ್ಲ. ಹಾಗಿದ್ದ ಮೇಲೆ ಬಿಜೆಪಿ ಪರ ನಾವೇಕೆ ಕೆಲಸ ಮಾಡಬೇಕು. ಇನ್ನು ಮುಂದೆ ಕೂಡ ಸವದಿ ಅವರನ್ನು ಹೆಚ್ಚು ಲೀಡ್‌ನಿಂದ ಗೆಲ್ಲಿಸುತ್ತೇವೆ. ಟಿಕೆಟ್ ತಪ್ಪಿಸುವ ಹುನ್ನಾರ ಮಾಡಿದ ನಿಮಂಥವರಿಗೆ ಬುದ್ಧಿ ಕಲಿಸುತ್ತೇವೆ’ ಎಂದು ಕೆಲ ಗ್ರಾಮ ಪಂಚಾಯಿತಿ ಸದಸ್ಯರೂ ಕಿಡಿ ಕಾರಿದರು.

ಜನರ ಆಕ್ರೋಶಕ್ಕೆ ಉತ್ತರ ಕೊಡಲಾಗದೇ ನೇರ್ಲಿ ಕೆಲಹೊತ್ತು ಸುಮ್ಮನೇ ಕುಳಿತರು. ಏನೂ ಪ್ರತಿಕ್ರಿಯಿಸದೇ ಸವದಿ ಅವರ ಮನೆಯಿಂದ ಹೊರಡಲು ಸಿದ್ಧರಾದರು. ಅವರನ್ನು ಹೊರಗೆ ಬಿಡದ ಜನ, ಉತ್ತರ ಕೊಟ್ಟೇ ಹೋಗಬೇಕು ಎಂದು ಎಳೆದಾಡಿದರು.

ಸ್ಥಳದಲ್ಲಿದ್ದ ಲಕ್ಷ್ಮಣ ಸವದಿ ಜನರನ್ನು ಸಮಾಧಾನಪಡಿಸಲು ಯತ್ನಿಸಿದರು. ಗಲಾಟೆ ಹೆಚ್ಚಾಗುವ ಪರಿಸ್ಥಿತಿ ತಲೆದೋರಿಂದ ಸವದಿ ಅವರೇ ನೇರ್ಲಿ ಅವರನ್ನು ಕೈ ಹಿಡಿದುಕೊಂಡು ಬಂದು ಕಾರಿನೊಳಗೆ ಹತ್ತಿಸಿದರು.

ಅಷ್ಟರೊಳಗೆ ಕಾರ್ ಸುತ್ತುವರಿದ ಜನ ಧಿಕ್ಕಾರ ಕೂಗಿದರು. ಅವಾಚ್ಯ ಪದಗಳಿಂದ ನಿಂದಿಸಿದರು. ಕಾರಿನ ಬಾಗಿಲಿಗೆ ಗುದ್ದಿದರು. ಸ್ಥಳಕ್ಕೆ ಬಂದ ಸವದಿ ಅವರ ಪುತ್ರರು ಜನರನ್ನು ಚದುರಿಸಿ ಕಾರಿಗೆ ದಾರಿ ಮಾಡಿಕೊಟ್ಟರು.

andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

6 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

19 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

21 hours ago