BREAKING NEWS

ಆಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತಳಾಗಿದ್ದ ನಟಿ ಇಸ್ಲಾಂಗೆ ಮತಾಂತರವಾಗಿ ಮದುವೆ

ಮುಂಬೈ: ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಅವರ ಆಶ್ಲೀಲ ಚಿತ್ರ ನಿರ್ಮಾಣದ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಗೆಹನಾ ವಸಿಷ್ಟ ಇಸ್ಲಾಂಗೆ ಮತಂತಾರವಾಗಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದಾರೆ.

ʼಬೆಹೆನೆನ್ʼ ,ʼಗಂಧಿ ಬಾತ್ʼ ನಲ್ಲಿ ನಟಿಸಿರುವ ಗೆಹನಾ ವಸಿಷ್ಟ ಕಿರುತೆರೆ ನಟಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಆಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿದ್ದ ಬಳಿಕ ಇದೀಗ ಮದುವೆ ವಿಚಾರದಲ್ಲಿ ನಟಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ನಟಿಯ ಪ್ರಿಯಕರ ಫೈಜಾನ್ ಅನ್ಸಾರಿ ಸಾಮಾಜಿಕ ಜಾಲತಾಣದ ಮಾಧ್ಯಮದ ಪ್ರಭಾವಿಯಾಗಿದ್ದಾರೆ. ಇತ್ತೀಚೆಗೆ ಅಮೇಜಾನ್‌ ಮಿನಿಯಲ್ಲಿ ಬಂದ “ದಾಟೆಬಾಜಿ” ಶೋನಲ್ಲಿ ಫೈಜಾನ್ ಅನ್ಸಾರಿ ಕಾಣಿಸಿಕೊಂಡಿದ್ದರು.

ಗೆಹನಾ ವಸಿಷ್ಟ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು, ತನ್ನ ಪ್ರಿಯಕನೊಂದಿಗೆ ವಿವಾಹವಾಗಿದ್ದಾರೆ. ಆತ್ಮೀಯರ ಸಮ್ಮುಖದಲ್ಲಿ ನಿಕಾಹ್‌ ಸಮಾರಂಭ ನಡೆದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಫೆಬ್ರವರಿ 3, 2021 ರಂದು ಮಾಲ್ವಾನಿ ಪೊಲೀಸರು ಬಂಗಲೆಯೊಂದರ ಮೇಲೆ ದಾಳಿ ನಡೆಸಿದ್ದರು.  ಅಲ್ಲಿ ಫಿಲ್ಮ್ಸ್‌ ಪ್ರೂಡಕ್ಷನ್‌ ವೊಂದರ ಬ್ಯಾನರ್‌ ಅಡಿಯಲ್ಲಿ ಕೆಲ ವ್ಯಕ್ತಿಗಳು ಆಶ್ಲೀಲ ಚಿತ್ರದ ನಿರ್ಮಾಣವನ್ನು ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಆ ವೇಳೆ ನಟಿ ಗೆಹನಾ ವಸಿಷ್ಟ ಇರಲಿಲ್ಲ. ಅವಳು ಆಶ್ಲೀಲ ಕಂಟೆಂಟ್‌ ಗಳನ್ನು ವಿವಿಧ ಪ್ರೂಡಕ್ಷನ್‌ ಸಂಸ್ಥೆ ಹಾಗೂ ಕೆಲ ಓಟಿಟಿ ಫ್ಲಾಟ್‌ ಫಾರ್ಮ್‌ ಗಳಿಗೆ ಮಾರಾಟ ಮಾಡುತ್ತಿದ್ದಳು ಎನ್ನುವ ಆರೋಪದ ಮೇಲೆ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಆ ಬಳಿಕ ಆಕೆಗೆ ಜಾಮೀನು ನೀಡಲಾಗಿತ್ತು.

andolanait

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

2 hours ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

2 hours ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

2 hours ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

2 hours ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

3 hours ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

3 hours ago