ಮುಂಬೈ: ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಆಶ್ಲೀಲ ಚಿತ್ರ ನಿರ್ಮಾಣದ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಗೆಹನಾ ವಸಿಷ್ಟ ಇಸ್ಲಾಂಗೆ ಮತಂತಾರವಾಗಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದಾರೆ.
ʼಬೆಹೆನೆನ್ʼ ,ʼಗಂಧಿ ಬಾತ್ʼ ನಲ್ಲಿ ನಟಿಸಿರುವ ಗೆಹನಾ ವಸಿಷ್ಟ ಕಿರುತೆರೆ ನಟಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಆಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿದ್ದ ಬಳಿಕ ಇದೀಗ ಮದುವೆ ವಿಚಾರದಲ್ಲಿ ನಟಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ನಟಿಯ ಪ್ರಿಯಕರ ಫೈಜಾನ್ ಅನ್ಸಾರಿ ಸಾಮಾಜಿಕ ಜಾಲತಾಣದ ಮಾಧ್ಯಮದ ಪ್ರಭಾವಿಯಾಗಿದ್ದಾರೆ. ಇತ್ತೀಚೆಗೆ ಅಮೇಜಾನ್ ಮಿನಿಯಲ್ಲಿ ಬಂದ “ದಾಟೆಬಾಜಿ” ಶೋನಲ್ಲಿ ಫೈಜಾನ್ ಅನ್ಸಾರಿ ಕಾಣಿಸಿಕೊಂಡಿದ್ದರು.
ಗೆಹನಾ ವಸಿಷ್ಟ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು, ತನ್ನ ಪ್ರಿಯಕನೊಂದಿಗೆ ವಿವಾಹವಾಗಿದ್ದಾರೆ. ಆತ್ಮೀಯರ ಸಮ್ಮುಖದಲ್ಲಿ ನಿಕಾಹ್ ಸಮಾರಂಭ ನಡೆದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫೆಬ್ರವರಿ 3, 2021 ರಂದು ಮಾಲ್ವಾನಿ ಪೊಲೀಸರು ಬಂಗಲೆಯೊಂದರ ಮೇಲೆ ದಾಳಿ ನಡೆಸಿದ್ದರು. ಅಲ್ಲಿ ಫಿಲ್ಮ್ಸ್ ಪ್ರೂಡಕ್ಷನ್ ವೊಂದರ ಬ್ಯಾನರ್ ಅಡಿಯಲ್ಲಿ ಕೆಲ ವ್ಯಕ್ತಿಗಳು ಆಶ್ಲೀಲ ಚಿತ್ರದ ನಿರ್ಮಾಣವನ್ನು ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಆ ವೇಳೆ ನಟಿ ಗೆಹನಾ ವಸಿಷ್ಟ ಇರಲಿಲ್ಲ. ಅವಳು ಆಶ್ಲೀಲ ಕಂಟೆಂಟ್ ಗಳನ್ನು ವಿವಿಧ ಪ್ರೂಡಕ್ಷನ್ ಸಂಸ್ಥೆ ಹಾಗೂ ಕೆಲ ಓಟಿಟಿ ಫ್ಲಾಟ್ ಫಾರ್ಮ್ ಗಳಿಗೆ ಮಾರಾಟ ಮಾಡುತ್ತಿದ್ದಳು ಎನ್ನುವ ಆರೋಪದ ಮೇಲೆ ಪೊಲೀಸರು ಆಕೆಯನ್ನು ಬಂಧಿಸಿದ್ದರು. ಆ ಬಳಿಕ ಆಕೆಗೆ ಜಾಮೀನು ನೀಡಲಾಗಿತ್ತು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…