BREAKING NEWS

ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ಧೋರಣೆ ಎಲ್ಲರಲ್ಲಿ ಅಸಹ್ಯ ತರಿಸುವಂತಿದೆ : ಸಂಸದ ತೇಜಸ್ವಿಸೂರ್ಯ

ಬೆಂಗಳೂರು- ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಾಡಿದೆ ಎಂದು ಸಂಸದ ತೇಜಸ್ವಿಸೂರ್ಯ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನಿರ್ಧಾರದಿಂದ ಇಲ್ಲಿನವರೆಗೆ ಯಾವ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿರಲಿಲ್ಲವೋ ಅವರಿಗೆ ನ್ಯಾಯ ಒದಗಿಸಲು ಸಾಧ್ಯವಾಗಿದೆ. ಒಳ ಮೀಸಲಾತಿ ಘೋಷಣೆ ವಿರೋಧಿಸುವ ಕಾಂಗ್ರೆಸ್ ಧೋರಣೆ ಎಲ್ಲರಲ್ಲಿ ಆಶ್ಚರ್ಯ ತಂದಿದೆ. ಅದು ಅಸಹ್ಯ ತರಿಸುವಂತಿದೆ ಎಂದು ಆಕ್ಷೇಪಿಸಿದರು.
ಅಲ್ಪಸಂಖ್ಯಾತರಿಗೆ ಇದ್ದ, ಮುಸ್ಲಿಂ ಸಮುದಾಯಕ್ಕೆ ಸಂವಿಧಾನಬಾಹಿರವಾಗಿ ಕೊಡುತ್ತಿದ್ದ ಶೇ.4 ಮೀಸಲಾತಿಯನ್ನು ರದ್ದುಪಡಿಸಿ ಲಿಂಗಾಯತ, ಒಕ್ಕಲಿಗರಿಗೆ ನೀಡಿದ್ದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದರು.
ಶೇ.13ರಷ್ಟು ಮುಸ್ಲಿಂ ಸಮುದಾಯ ರಾಜ್ಯದಲ್ಲಿದೆ. ಅದಕ್ಕೆ ಅನುಗುಣವಾಗಿ ಅವರಿಗೆ ಮೀಸಲಾತಿ ಕೊಡುವುದಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಹೇಳುತ್ತಿದ್ದಾರೆ. ಇದು ರಾಜ್ಯದ ಹಿಂದುಳಿದ ಸಮುದಾಯಗಳಿಗೆ ಮಾಡುತ್ತಿರುವ ಅತ್ಯಂತ ಘೋರ ಅನ್ಯಾಯ ಎಂದರು.
ಕಾಂಗ್ರೆಸ್ ಪಾರ್ಟಿ 1954ರಿಂದ ಇತಿಹಾಸದುದ್ದಕ್ಕೂ ನಿರಂತರವಾಗಿ ಒಬಿಸಿ ಸಮುದಾಯಗಳ ವಿರುದ್ಧ ಪಿತೂರಿ ಮಾಡುತ್ತಲೇ ಬಂದಿದೆ. ಕಾಂಗ್ರೆಸ್ ಪಕ್ಷವು ಹಿಂದುಳಿದ ಸಮುದಾಯದ ಸಾಂವಿಧಾನಿಕ ಹಕ್ಕುಗಳ ನಿರಾಕರಣೆ ಮಾಡುತ್ತಿದೆ. ಅಲ್ಲದೆ ಈ ಸಮುದಾಯದ ಹಕ್ಕು, ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡಿ ತುಷ್ಟೀಕರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಂಧ್ರದಲ್ಲಿ 2005ರಲ್ಲಿ ಕಾಂಗ್ರೆಸ್ ಪಕ್ಷ ಅಕಾರದಲ್ಲಿದ್ದಾಗ ಕೇವಲ ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿಯನ್ನು ಒಬಿಸಿ ಸಮುದಾಯದ ಬಾಸ್ಕೆಟ್‍ನಿಂದ ಕಿತ್ತು ಕೊಟ್ಟಿದೆ. ಅವರ ಸಾಮಾಜಿಕ ಹಿಂದುಳಿದಿರುವಿಕೆ, ವಿದ್ಯೆಯಲ್ಲಿನ ಹಿಂದುಳಿದಿರುವಿಕೆ ಇದಕ್ಕೆ ಆಧಾರವಾಗಿರಲಿಲ್ಲ. ಅಲ್ಲಿನ ಹೈಕೋರ್ಟ್, ಸುಪ್ರೀಂ ಕೋರ್ಟ್ ಅದನ್ನು ರದ್ದು ಮಾಡಲು ಸೂಚಿಸಿತ್ತು. ಆದರೂ ಮತ್ತೆ 2010ರಲ್ಲಿ ಶೇ 4 ಮೀಸಲಾತಿಯನ್ನು ಕೊಡಲಾಗಿದೆ ಎಂದು ವಿವರಿಸಿದರು.
ಒಬಿಸಿ ಸಮುದಾಯ, ಹಿಂದೂಗಳ ವಿರುದ್ಧ ಕಾಂಗ್ರೆಸ್ ಪಕ್ಷಕ್ಕೆ ಕೋಪ, ಸಿಟ್ಟು ಯಾಕೆ? ಅವರ ಕಡೆಗಣನೆ ಏಕೆ? ಎಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದು ತೇಜಸ್ವಿಸೂರ್ಯ ಕೇಳಿದರು.
ಮಂಡಲ್ ಕಮಿಷನ್ ವರದಿಯನ್ನೂ ಸಂಸತ್ತಿನಲ್ಲಿ ರಾಜೀವ್ ಗಾಂಧಿ ಅವರು ಅಕೃತವಾಗಿ ವಿರೋಸಿದ್ದರು. ಹಿಂದುಳಿದ ಸಮುದಾಯಗಳ ಮೇಲೆ ಯಾಕಿಷ್ಟು ದ್ವೇಷ ಎಂಬ ಪ್ರಶ್ನೆಗೆ ಇದು ಇನ್ನಷ್ಟು ಪುಷ್ಟಿ ಕೊಡುವಂತಿದೆ. ವಿಪಿ ಸಿಂಗ್ ಸರಕಾರವು ಮಂಡಲ್ ಆಯೋಗದ ಶೇ 27 ಮೀಸಲಾತಿ ಜಾರಿಗೆ ಮುಂದಾದಾಗ ಇದನ್ನು ಬಿಜೆಪಿ ಬಾಹ್ಯ ಬೆಂಬಲ ಕೊಟ್ಟಿತ್ತು. ಆ ಮೂಲಕ ಅದರ ಜನರಿಗೆ ಸಹಕರಿಸಿದೆ ಎಂದು ತಿಳಿಸಿದರು.
ವೈದ್ಯಕೀಯ ಪದವಿ, ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಒಬಿಸಿ ಸಮುದಾಯಕ್ಕೆ ಶೇ 27 ರಷ್ಟು ಮೀಸಲಾತಿ ಬೇಡಿಕೆ ಇದ್ದರೂ ಅದನ್ನು ಮಾಡಿರಲಿಲ್ಲ. 2004ರಿಂದ 2014ರವರೆಗೆ ಯುಪಿಎ ಸರಕಾರ ಅಕಾರದಲ್ಲಿದ್ದಾಗ ಈ ಮನವಿಯನ್ನು ಯಾಕೆ ಪುರಸ್ಕಾರ ಮಾಡಿರಲಿಲ್ಲ ಎಂದು ಕೇಳಿದರು. ದಶಕಗಳ ಬೇಡಿಕೆಯಾದ ಇದನ್ನೂ ಕೂಡ ಮೋದಿಜಿ ಸರಕಾರ ಈಡೇರಿಸಿ ಹಿಂದುಳಿದ ಸಮಾಜಕ್ಕೆ ನ್ಯಾಯ ದೊರಕಿಸಿ ಕೊಟ್ಟಿದೆ ಎಂದು ವಿಶ್ಲೇಷಿಸಿದರು.

lokesh

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

2 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

2 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

2 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

2 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

14 hours ago