ಮುಂಬಯಿ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಸಿಲುಕಿಸದಿರಲು 25 ಕೋಟಿ ರೂ. ಲಂಚ ಕೇಳಿದ ಆರೋಪದ ಮೇಲೆ ಎನ್ಸಿಬಿ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮತ್ತು ಇತರ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಶುಕ್ರವಾರ ಅವರ ನಿವಾಸ, ಕಚೇರಿಗಳ ಆವರಣದಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮುಂಬೈ, ದೆಹಲಿ, ರಾಂಚಿ ಮತ್ತು ಕಾನ್ಪುರದ 29 ಸ್ಥಳಗಳಲ್ಲಿ ಶೋಧ ಕಾರ್ಯಗಳನ್ನು ನಡೆಸಲಾಗಿದೆ.
ಅಕ್ಟೋಬರ್ 2, 2021 ರಂದು ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಡ್ರಗ್ ಬಸ್ಟ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಚಾರ್ಜ್ ಶೀಟ್ ಸಲ್ಲಿಸಿದ ಎನ್ಸಿಬಿ ಆರ್ಯನ್ ಖಾನ್ಗೆ ಕ್ಲೀನ್ ಚಿಟ್ ನೀಡಿತ್ತು, ಆದರೆ ಡ್ರಗ್ಸ್ ವಿರೋಧಿ ಏಜೆನ್ಸಿ ಸ್ಥಾಪಿಸಿದ ಎಸ್ಐಟಿ ಸಮೀರ್ ವಾಂಖೆಡೆ ನೇತೃತ್ವದ ತನಿಖೆಯಲ್ಲಿ ಲೋಪವಾಗಿದೆ ಎಂದು ಹೇಳಿದೆ.
ಐಆರ್ಎಸ್ ಅಧಿಕಾರಿ ವಾಂಖೆಡೆ ಮತ್ತು ಇತರರು ಮಾದಕ ದ್ರವ್ಯ ದಂಧೆಯಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅಧಿಕಾರಿ ಮತ್ತು ಆತನ ಸಹಚರರಿಂದ ಮುಂಗಡವಾಗಿ 50 ಲಕ್ಷ ರೂಪಾಯಿ ಸಂಗ್ರಹಿಸಲಾಗಿದೆ ಎಂದು ಸಿಬಿಐಗೆ ಮಾಹಿತಿ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್ಯನ್ ಖಾನ್ ಬಂಧನದ ವೇಳೆ ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮುಖ್ಯಸ್ಥರಾಗಿದ್ದ ವಾಂಖೆಡೆ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಚೆನ್ನೈನಲ್ಲಿರುವ ತೆರಿಗೆದಾರರ ಸೇವೆಗಳ ಮಹಾನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿತ್ತು.
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…