BREAKING NEWS

ಯೋಧನನ್ನು ಪಿಎಫ್‌ಐ ಕಾರ್ಯಕರ್ತರು ಅಪಹರಿಸಿ ಥಳಿಸಿದ ಪ್ರಕರಣ : ಇದು ಯೋಧನೇ ಕಟ್ಟಿದ ಕಥೆ

ತಿರುವನಂತಪುರಂ : ಕೇರಳದ ಕಡಕ್ಕಲ್‌ನಲ್ಲಿ ಭಾರತೀಯ ಯೋಧನ ಮೇಲೆ ಹಲ್ಲೆ ನಡೆಸಿ ಬೆನ್ನ ಮೇಲೆ ಪಿಎಫ್‌ಐ ಎಂದು ಬರೆಯಲಾದ ಘಟನೆ ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಸ್ವತಃ ಯೋಧನೇ ಕಟ್ಟಿರುವ ಕಥೆ ಇದು ಎಂದು ತನಿಖೆ ವೇಳೆ ಸಾಬೀತಾಗಿದೆ.

ರಾಜಸ್ಥಾನದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ಸೇನೆಯ ಯೋಧ ಶೈನ್ ಕುಮಾರ್ ತನ್ನನ್ನು ಆರು ಮಂದಿ ಅಪಹರಿಸಿ ಥಳಿಸಿದ್ದಾರೆಂದು ದೂರು ನೀಡಿದ್ದರು. ಯೋಧನ ಸ್ನೇಹಿತ ಜೋಶಿ ಎಂಬಾತನನ್ನು ಕಸ್ಟಡಿಗೆ ಪಡೆದು ವಿಚಾರಿಸಿದಾಗ ಇದೆಲ್ಲಾ ಕಟ್ಟು ಕತೆ ಎನ್ನುವುದು ಬಹಿರಂಗಗೊಂಡಿದೆ ಎಂದು madhyamam.com ವರದಿ ಮಾಡಿದೆ.

ತಾನು ಭಾನುವಾರ ರಾತ್ರಿ ಸ್ನೇಹಿತನ ಮನೆಗೆ ಹೋಗುವಾಗ ಹತ್ತಿರದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ವ್ಯಕ್ತಿಗಳ ಗುಂಪು ತನ್ನನ್ನು ಕಟ್ಟಿ ಹಾಕಿ ಥಳಿಸಿದ್ದಾರೆ ಎಂದು ಆರೋಪಿಸಿದ್ದರು. ತನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದು ಮಾತ್ರವಲ್ಲದೆ ತನ್ನ ಅಂಗಿಯನ್ನು ಹರಿದು ಹಾಕಿ, ಹಸಿರು ಬಣ್ಣದಲ್ಲಿ ಪಿಎಫ್ಐ ಎಂದು ಬರೆದಿದ್ದಾರೆ ಎಂದು ಅವರು ಆರೋಪಿಸಿದ್ದರು.

ಆದರೆ, ತನಿಖೆ ಮುಂದುವರೆದಂತೆ ಇಡೀ ಘಟನೆಗೆ ತಿರುವು ಪಡೆದುಕೊಂಡಿದ್ದು, ಸುಲಭದ ದಾರಿಯಲ್ಲಿ ಜನಪ್ರಿಯಗೊಳ್ಳಲು ಸ್ವತಃ ಯೋಧನೇ ಮಾಡಿರುವ ಕಟ್ಟು ಕತೆ ಎಂದು ಪೊಲೀಸರು ಕಂಡು ಕೊಂಡಿದ್ದಾರೆ. ಯೋಧನ ಬೆನ್ನಿನ ಮೇಲೆ ಪಿಎಫ್ಐ ಎಂದು ಶೈನ್‌ ಕುಮಾರ್‌ನ ಗೆಳೆಯ ಜೋಶಿ ಬರೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಶೈನ್ ಅವರ ಬೆನ್ನಿನ ಮೇಲೆ ಪಿಎಫ್ಐ ಎಂದು ಬರೆಯಲು ಬಳಸಲಾದ ಬಣ್ಣ ಮತ್ತು ಬ್ರಷ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೈನ್ ಗೆ ಖ್ಯಾತಿ ಮತ್ತು ಮನ್ನಣೆ ಪಡೆಯುವ ಆಸೆ ಇತ್ತು, ಇದಕ್ಕಾಗಿ ತನ್ನ ಮೇಲೆ ದಾಳಿ ನಡೆದಿರುವ ಬಗ್ಗೆ ಕಥೆ ಕಟ್ಟಲಾಗಿತ್ತು ಎಂದು ಜೋಶಿ ತಿಳಿಸಿದ್ದಾನೆ. ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

lokesh

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

2 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

2 hours ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

2 hours ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

2 hours ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

2 hours ago