BREAKING NEWS

ಯೋಧನನ್ನು ಪಿಎಫ್‌ಐ ಕಾರ್ಯಕರ್ತರು ಅಪಹರಿಸಿ ಥಳಿಸಿದ ಪ್ರಕರಣ : ಇದು ಯೋಧನೇ ಕಟ್ಟಿದ ಕಥೆ

ತಿರುವನಂತಪುರಂ : ಕೇರಳದ ಕಡಕ್ಕಲ್‌ನಲ್ಲಿ ಭಾರತೀಯ ಯೋಧನ ಮೇಲೆ ಹಲ್ಲೆ ನಡೆಸಿ ಬೆನ್ನ ಮೇಲೆ ಪಿಎಫ್‌ಐ ಎಂದು ಬರೆಯಲಾದ ಘಟನೆ ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಸ್ವತಃ ಯೋಧನೇ ಕಟ್ಟಿರುವ ಕಥೆ ಇದು ಎಂದು ತನಿಖೆ ವೇಳೆ ಸಾಬೀತಾಗಿದೆ.

ರಾಜಸ್ಥಾನದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ಸೇನೆಯ ಯೋಧ ಶೈನ್ ಕುಮಾರ್ ತನ್ನನ್ನು ಆರು ಮಂದಿ ಅಪಹರಿಸಿ ಥಳಿಸಿದ್ದಾರೆಂದು ದೂರು ನೀಡಿದ್ದರು. ಯೋಧನ ಸ್ನೇಹಿತ ಜೋಶಿ ಎಂಬಾತನನ್ನು ಕಸ್ಟಡಿಗೆ ಪಡೆದು ವಿಚಾರಿಸಿದಾಗ ಇದೆಲ್ಲಾ ಕಟ್ಟು ಕತೆ ಎನ್ನುವುದು ಬಹಿರಂಗಗೊಂಡಿದೆ ಎಂದು madhyamam.com ವರದಿ ಮಾಡಿದೆ.

ತಾನು ಭಾನುವಾರ ರಾತ್ರಿ ಸ್ನೇಹಿತನ ಮನೆಗೆ ಹೋಗುವಾಗ ಹತ್ತಿರದ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ವ್ಯಕ್ತಿಗಳ ಗುಂಪು ತನ್ನನ್ನು ಕಟ್ಟಿ ಹಾಕಿ ಥಳಿಸಿದ್ದಾರೆ ಎಂದು ಆರೋಪಿಸಿದ್ದರು. ತನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದು ಮಾತ್ರವಲ್ಲದೆ ತನ್ನ ಅಂಗಿಯನ್ನು ಹರಿದು ಹಾಕಿ, ಹಸಿರು ಬಣ್ಣದಲ್ಲಿ ಪಿಎಫ್ಐ ಎಂದು ಬರೆದಿದ್ದಾರೆ ಎಂದು ಅವರು ಆರೋಪಿಸಿದ್ದರು.

ಆದರೆ, ತನಿಖೆ ಮುಂದುವರೆದಂತೆ ಇಡೀ ಘಟನೆಗೆ ತಿರುವು ಪಡೆದುಕೊಂಡಿದ್ದು, ಸುಲಭದ ದಾರಿಯಲ್ಲಿ ಜನಪ್ರಿಯಗೊಳ್ಳಲು ಸ್ವತಃ ಯೋಧನೇ ಮಾಡಿರುವ ಕಟ್ಟು ಕತೆ ಎಂದು ಪೊಲೀಸರು ಕಂಡು ಕೊಂಡಿದ್ದಾರೆ. ಯೋಧನ ಬೆನ್ನಿನ ಮೇಲೆ ಪಿಎಫ್ಐ ಎಂದು ಶೈನ್‌ ಕುಮಾರ್‌ನ ಗೆಳೆಯ ಜೋಶಿ ಬರೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಶೈನ್ ಅವರ ಬೆನ್ನಿನ ಮೇಲೆ ಪಿಎಫ್ಐ ಎಂದು ಬರೆಯಲು ಬಳಸಲಾದ ಬಣ್ಣ ಮತ್ತು ಬ್ರಷ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೈನ್ ಗೆ ಖ್ಯಾತಿ ಮತ್ತು ಮನ್ನಣೆ ಪಡೆಯುವ ಆಸೆ ಇತ್ತು, ಇದಕ್ಕಾಗಿ ತನ್ನ ಮೇಲೆ ದಾಳಿ ನಡೆದಿರುವ ಬಗ್ಗೆ ಕಥೆ ಕಟ್ಟಲಾಗಿತ್ತು ಎಂದು ಜೋಶಿ ತಿಳಿಸಿದ್ದಾನೆ. ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

lokesh

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

14 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

17 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

19 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

19 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

19 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

19 hours ago