ನವದೆಹಲಿ : ತಾನು ಅಕ್ರಮವಾಗಿ ವಿದೇಶಿ ದೇಣಿಗೆಯನ್ನು ಸ್ವೀಕರಿಸಿದ್ದೇನೆಂದು ತನ್ನ ವಿರುದ್ಧ ಹೊರಿಸಲಾದ ಆರೋಪಗಳನ್ನು ಸಾಬೀತುಪಡಿಸಲು ಕೇಂದ್ರ ಸರಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲವೆಂದು ‘ನ್ಯೂಸ್ ಕ್ಲಿಕ್ ’ ಸುದ್ದಿಜಾಲತಾಣ ಬುಧವಾರ ಹೇಳಿದೆ.
‘ನ್ಯೂಸ್ ಕ್ಲಿಕ್ ’ ಚೀನಾದಿಂದ ದೇಣಿಗೆ ಸ್ವೀಕರಿಸಿದೆಯೆದೆಂಬ ಆರೋಪಗಳ ಹಿನ್ನೆಲೆಯಲ್ಲಿ ದಿಲ್ಲಿ ಪೊಲೀಸರ ವಿಶೇಷ ದಳವು ಸುದ್ದಿಜಾಲತಾಣದ ಜೊತೆ ನಂಟು ಹೊಂದಿರುವ ಹಲವಾರು ಪತ್ರಕರ್ತರ ನಿವಾಸದ ಮೇಲೆ ದಾಳಿ ನಡೆಸಿತ್ತು ಹಾಗೂ ಸುದ್ದಿಜಾಲತಾಣದ ಕಚೇರಿಗೆ ಬೀಗಮುದ್ರೆ ಹಾಕಿದೆ.
ಈ ಬಗ್ಗೆ ನ್ಯೂಸ್ ಕ್ಲಿಕ್ ಬುಧವಾರ ರಾತ್ರಿ ಹೇಳಿಕೆಯೊಂದನ್ನು ನೀಡಿ, ‘‘ನಮ್ಮ ವಿರುದ್ಧ ಹೊರಿಸಲಾದ ಆರೋಪಗಳ ಕುರಿತಾದ ನಿಖರ ವಿವರಗಳನ್ನಾಗಲಿ ಅಥವಾ ಎಫ್ಐಆರ್ ಪ್ರತಿಯನ್ನಾಗಲಿ ಪೊಲೀಸರು ನೀಡಿಲ್ಲ’’ ಎಂದು ಹೇಳಿದೆ.
ಕಚೇರಿಯ ಆವರಣದಿಂದ ಹಾಗೂ ಅದರ ಉದ್ಯೋಗಿಗಳ ನಿವಾಸಗಳಿಂದ ಯಾವುದೇ ಕಾನೂನಾತ್ಮಕ ನಿಯಮಗಳನ್ನು ಅನುಸರಿಸದೆಯೇ ಇಲೆಕ್ಟ್ರಾನಿಕ್ ಸಲಕರಣೆಗಳು, ದಾಖಲೆ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.
ಭಯೋತ್ಪಾದನೆ ನಿಗ್ರಹ ಕಾನೂನಿನಡಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವುದು , ಕೇಂದ್ರ ಸರಕಾರದ ವಿರುದ್ಧ ಯಾವುದೇ ಟೀಕೆಯನ್ನು ಮಾಡುವುದನ್ನು ದೇಶದ್ರೋಹ ಅಥವಾ ರಾಷ್ಟ್ರವಿರೋಧಿಯೆಂದು ಪರಿಗಣಿಸಲಾಗುವುದು ಎಂದು ಬೆದರಿಸುವ ಉದ್ದೇಶದಿಂದ ಕೂಡಿದೆ ಎಂದು ‘ನ್ಯೂಸ್ ಕ್ಲಿಕ್ ’ ತಿಳಿಸಿದೆ.
ತನ್ನ ಎಲ್ಲಾ ಮಾಹಿತಿ, ದಾಖಲೆಗಳು ಹಾಗೂ ಸಂವಹನ ಉಪಕರಣಗಳನ್ನು ವಶಪಡಿಸಿಕೊಂಡಿರುವ ಹೊರತಾಗಿಯೂ ತನ್ನ ವಿರುದ್ಧದ ಯಾವುದೇ ಆರೋಪಗಳನ್ನು ದೃಢಪಡಿಸಲು ಕೇಂದ್ರ ಸರಕಾರಕ್ಕೆ ಸಾಧ್ಯವಾಗಿಲ್ಲ. ತನ್ನ ವಿರುದ್ಧ ಕರಾಳವಾದ ಯುಎಪಿಎ ಕಾನೂನನ್ನು ಹೇರಲು ಅದಕ್ಕೆ ನ್ಯೂಯಾರ್ಕ್ ಟ್ರೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಬೋಗಸ್ ಲೇಖನವೊಂದು ಬೇಕಾಯಿತು.
ರೈತರು, ಕಾರ್ಮಿಕರು ಹಾಗೂ ಸಮಾಜದ ಇತರ ನಿರ್ಲಕ್ಷಿತ ವರ್ಗಗಳನ್ನೊಳಗೊಂಡ ವಾಸ್ತವಿಕ ಭಾರತದ ಕಥೆಯನ್ನು ಪ್ರಸ್ತುತಪಡಿಸುವ ಸ್ವತಂತ್ರ ಹಾಗೂ ನಿರ್ಭೀತ ಧ್ವನಿಗಳನ್ನು ಅಡಗಿಸುವ ಹಾಗೂ ಅದುಮಿಡುವ ಪ್ರಯತ್ನ ಇದಾಗಿದೆ ಎಂದು ನ್ಯೂಸ್ ಕ್ಲಿಕ್ ಹೇಳಿಕೆಯಲ್ಲಿ ತಿಳಿಸಿದೆ.
ಚೀನಾ ಪರವಾಗಿ ಪ್ರಚಾರ ಮಾಡಲು ನ್ಯೂಸ್ ಕ್ಲಿಕ್ ಸುದ್ದಿಜಾಲತಾಣವು ಅಮೆರಿಕ ಮೂಲದ ಮಿಲಿಯಾಧೀಶ ನೆವಿಲ್ ರಾಯ್ ಸಿಂಗಂ ಅವರಿಗೆ ಸೇರಿದ ನೆಟ್ವರ್ಕ್ ಮೂಲಕ ಭಾರೀ ಮೊತ್ತದ ನಿಧಿಗಳನ್ನು ಪಡೆದಿದೆಯೆಂದು ನೂಯಾರ್ಕ್ ಟೈಮ್ಸ್ ದೈನಿಕವು ಆಗಸ್ಟ್ 5ರಂದು ವರದಿ ಮಾಡಿತ್ತು.
ದೆಹಲಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ದಳಕ್ಕೆ ಭಾರತೀಯ ದಂಡಸಂಹಿತೆಯಡಿ ನ್ಯೂಸ್ ಕ್ಲಿಕ್ ವಿರುದ್ಧ ಒಂದೇ ಒಂದು ದೋಷಾರೋಪ ದಾಖಲಿಸಲು ಸಾಧ್ಯವಾಗಿಲ್ಲ ಎಂದು ನ್ಯೂಸ್ ಕ್ಲಿಕ್ ಹೇಳಿಕೆ ತಿಳಿಸಿದೆ.
ಮಂಗಳವಾರ ತನ್ನ ನಿವಾಸದ ಮೇಲೆ ನಡೆದ ದಾಳಿ ಕಾರ್ಯಾಚರಣೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ತನ್ನ ಬಳಿಕ 2020ರ ದೆಹಲಿ ಗಲಭೆ ಹಾಗೂ 2019-20ರಲ್ಲಿ ದೆಹಲಿಯ ಶಾಹೀನ್ ಭಾಗ್ ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ತಾನು ಮಾಡಿರುವ ವರದಿಗಾರಿಕೆಗಳ ಬಗ್ಗೆ ಪ್ರಶ್ನಿಸಿದರೆಂದು ನ್ಯೂಸ್ ಕ್ಲಿಕ್ ಪತ್ರಕರ್ತ ಅಭಿಸಾರ್ ಶರ್ಮಾ ಅವರು ತಿಳಿಸಿದ್ದಾರೆ.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…