BREAKING NEWS

ತನ್ನ ವಿರುದ್ಧ ಆರೋಪ ಸಾಬೀತುಪಡಿಸಲು ಕೇಂದ್ರ ಸರಕಾರ ವಿಫಲ: ನ್ಯೂಸ್ ಕ್ಲಿಕ್

ನವದೆಹಲಿ : ತಾನು ಅಕ್ರಮವಾಗಿ ವಿದೇಶಿ ದೇಣಿಗೆಯನ್ನು ಸ್ವೀಕರಿಸಿದ್ದೇನೆಂದು ತನ್ನ ವಿರುದ್ಧ ಹೊರಿಸಲಾದ ಆರೋಪಗಳನ್ನು ಸಾಬೀತುಪಡಿಸಲು ಕೇಂದ್ರ ಸರಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲವೆಂದು ‘ನ್ಯೂಸ್ ಕ್ಲಿಕ್ ’ ಸುದ್ದಿಜಾಲತಾಣ ಬುಧವಾರ ಹೇಳಿದೆ.

‘ನ್ಯೂಸ್ ಕ್ಲಿಕ್ ’ ಚೀನಾದಿಂದ ದೇಣಿಗೆ ಸ್ವೀಕರಿಸಿದೆಯೆದೆಂಬ ಆರೋಪಗಳ ಹಿನ್ನೆಲೆಯಲ್ಲಿ ದಿಲ್ಲಿ ಪೊಲೀಸರ ವಿಶೇಷ ದಳವು ಸುದ್ದಿಜಾಲತಾಣದ ಜೊತೆ ನಂಟು ಹೊಂದಿರುವ ಹಲವಾರು ಪತ್ರಕರ್ತರ ನಿವಾಸದ ಮೇಲೆ ದಾಳಿ ನಡೆಸಿತ್ತು ಹಾಗೂ ಸುದ್ದಿಜಾಲತಾಣದ ಕಚೇರಿಗೆ ಬೀಗಮುದ್ರೆ ಹಾಕಿದೆ.

ಈ ಬಗ್ಗೆ ನ್ಯೂಸ್ ಕ್ಲಿಕ್ ಬುಧವಾರ ರಾತ್ರಿ ಹೇಳಿಕೆಯೊಂದನ್ನು ನೀಡಿ, ‘‘ನಮ್ಮ ವಿರುದ್ಧ ಹೊರಿಸಲಾದ ಆರೋಪಗಳ ಕುರಿತಾದ ನಿಖರ ವಿವರಗಳನ್ನಾಗಲಿ ಅಥವಾ ಎಫ್ಐಆರ್ ಪ್ರತಿಯನ್ನಾಗಲಿ ಪೊಲೀಸರು ನೀಡಿಲ್ಲ’’ ಎಂದು ಹೇಳಿದೆ.

ಕಚೇರಿಯ ಆವರಣದಿಂದ ಹಾಗೂ ಅದರ ಉದ್ಯೋಗಿಗಳ ನಿವಾಸಗಳಿಂದ ಯಾವುದೇ ಕಾನೂನಾತ್ಮಕ ನಿಯಮಗಳನ್ನು ಅನುಸರಿಸದೆಯೇ ಇಲೆಕ್ಟ್ರಾನಿಕ್ ಸಲಕರಣೆಗಳು, ದಾಖಲೆ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಭಯೋತ್ಪಾದನೆ ನಿಗ್ರಹ ಕಾನೂನಿನಡಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವುದು , ಕೇಂದ್ರ ಸರಕಾರದ ವಿರುದ್ಧ ಯಾವುದೇ ಟೀಕೆಯನ್ನು ಮಾಡುವುದನ್ನು ದೇಶದ್ರೋಹ ಅಥವಾ ರಾಷ್ಟ್ರವಿರೋಧಿಯೆಂದು ಪರಿಗಣಿಸಲಾಗುವುದು ಎಂದು ಬೆದರಿಸುವ ಉದ್ದೇಶದಿಂದ ಕೂಡಿದೆ ಎಂದು ‘ನ್ಯೂಸ್ ಕ್ಲಿಕ್ ’ ತಿಳಿಸಿದೆ.

ತನ್ನ ಎಲ್ಲಾ ಮಾಹಿತಿ, ದಾಖಲೆಗಳು ಹಾಗೂ ಸಂವಹನ ಉಪಕರಣಗಳನ್ನು ವಶಪಡಿಸಿಕೊಂಡಿರುವ ಹೊರತಾಗಿಯೂ ತನ್ನ ವಿರುದ್ಧದ ಯಾವುದೇ ಆರೋಪಗಳನ್ನು ದೃಢಪಡಿಸಲು ಕೇಂದ್ರ ಸರಕಾರಕ್ಕೆ ಸಾಧ್ಯವಾಗಿಲ್ಲ. ತನ್ನ ವಿರುದ್ಧ ಕರಾಳವಾದ ಯುಎಪಿಎ ಕಾನೂನನ್ನು ಹೇರಲು ಅದಕ್ಕೆ ನ್ಯೂಯಾರ್ಕ್ ಟ್ರೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಬೋಗಸ್ ಲೇಖನವೊಂದು ಬೇಕಾಯಿತು.

ರೈತರು, ಕಾರ್ಮಿಕರು ಹಾಗೂ ಸಮಾಜದ ಇತರ ನಿರ್ಲಕ್ಷಿತ ವರ್ಗಗಳನ್ನೊಳಗೊಂಡ ವಾಸ್ತವಿಕ ಭಾರತದ ಕಥೆಯನ್ನು ಪ್ರಸ್ತುತಪಡಿಸುವ ಸ್ವತಂತ್ರ ಹಾಗೂ ನಿರ್ಭೀತ ಧ್ವನಿಗಳನ್ನು ಅಡಗಿಸುವ ಹಾಗೂ ಅದುಮಿಡುವ ಪ್ರಯತ್ನ ಇದಾಗಿದೆ ಎಂದು ನ್ಯೂಸ್ ಕ್ಲಿಕ್ ಹೇಳಿಕೆಯಲ್ಲಿ ತಿಳಿಸಿದೆ.

ಚೀನಾ ಪರವಾಗಿ ಪ್ರಚಾರ ಮಾಡಲು ನ್ಯೂಸ್ ಕ್ಲಿಕ್ ಸುದ್ದಿಜಾಲತಾಣವು ಅಮೆರಿಕ ಮೂಲದ ಮಿಲಿಯಾಧೀಶ ನೆವಿಲ್ ರಾಯ್ ಸಿಂಗಂ ಅವರಿಗೆ ಸೇರಿದ ನೆಟ್ವರ್ಕ್ ಮೂಲಕ ಭಾರೀ ಮೊತ್ತದ ನಿಧಿಗಳನ್ನು ಪಡೆದಿದೆಯೆಂದು ನೂಯಾರ್ಕ್ ಟೈಮ್ಸ್ ದೈನಿಕವು ಆಗಸ್ಟ್ 5ರಂದು ವರದಿ ಮಾಡಿತ್ತು.

ದೆಹಲಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ದಳಕ್ಕೆ ಭಾರತೀಯ ದಂಡಸಂಹಿತೆಯಡಿ ನ್ಯೂಸ್ ಕ್ಲಿಕ್ ವಿರುದ್ಧ ಒಂದೇ ಒಂದು ದೋಷಾರೋಪ ದಾಖಲಿಸಲು ಸಾಧ್ಯವಾಗಿಲ್ಲ ಎಂದು ನ್ಯೂಸ್ ಕ್ಲಿಕ್ ಹೇಳಿಕೆ ತಿಳಿಸಿದೆ.

ಮಂಗಳವಾರ ತನ್ನ ನಿವಾಸದ ಮೇಲೆ ನಡೆದ ದಾಳಿ ಕಾರ್ಯಾಚರಣೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ತನ್ನ ಬಳಿಕ 2020ರ ದೆಹಲಿ ಗಲಭೆ ಹಾಗೂ 2019-20ರಲ್ಲಿ ದೆಹಲಿಯ ಶಾಹೀನ್ ಭಾಗ್ ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ತಾನು ಮಾಡಿರುವ ವರದಿಗಾರಿಕೆಗಳ ಬಗ್ಗೆ ಪ್ರಶ್ನಿಸಿದರೆಂದು ನ್ಯೂಸ್ ಕ್ಲಿಕ್ ಪತ್ರಕರ್ತ ಅಭಿಸಾರ್ ಶರ್ಮಾ ಅವರು ತಿಳಿಸಿದ್ದಾರೆ.

andolanait

Recent Posts

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…

1 min ago

ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…

1 hour ago

ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭ: ಡಿಸಿಎಂ ಡಿಕೆಶಿಗೆ ಕೇಂದ್ರ ಸರ್ಕಾರ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…

1 hour ago

ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಪ್ರಕರಣ: ಆರೋಪಿ ಅರೆಸ್ಟ್‌

ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ…

2 hours ago

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

3 hours ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

3 hours ago