BREAKING NEWS

ತನ್ನ ವಿರುದ್ಧ ಆರೋಪ ಸಾಬೀತುಪಡಿಸಲು ಕೇಂದ್ರ ಸರಕಾರ ವಿಫಲ: ನ್ಯೂಸ್ ಕ್ಲಿಕ್

ನವದೆಹಲಿ : ತಾನು ಅಕ್ರಮವಾಗಿ ವಿದೇಶಿ ದೇಣಿಗೆಯನ್ನು ಸ್ವೀಕರಿಸಿದ್ದೇನೆಂದು ತನ್ನ ವಿರುದ್ಧ ಹೊರಿಸಲಾದ ಆರೋಪಗಳನ್ನು ಸಾಬೀತುಪಡಿಸಲು ಕೇಂದ್ರ ಸರಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲವೆಂದು ‘ನ್ಯೂಸ್ ಕ್ಲಿಕ್ ’ ಸುದ್ದಿಜಾಲತಾಣ ಬುಧವಾರ ಹೇಳಿದೆ.

‘ನ್ಯೂಸ್ ಕ್ಲಿಕ್ ’ ಚೀನಾದಿಂದ ದೇಣಿಗೆ ಸ್ವೀಕರಿಸಿದೆಯೆದೆಂಬ ಆರೋಪಗಳ ಹಿನ್ನೆಲೆಯಲ್ಲಿ ದಿಲ್ಲಿ ಪೊಲೀಸರ ವಿಶೇಷ ದಳವು ಸುದ್ದಿಜಾಲತಾಣದ ಜೊತೆ ನಂಟು ಹೊಂದಿರುವ ಹಲವಾರು ಪತ್ರಕರ್ತರ ನಿವಾಸದ ಮೇಲೆ ದಾಳಿ ನಡೆಸಿತ್ತು ಹಾಗೂ ಸುದ್ದಿಜಾಲತಾಣದ ಕಚೇರಿಗೆ ಬೀಗಮುದ್ರೆ ಹಾಕಿದೆ.

ಈ ಬಗ್ಗೆ ನ್ಯೂಸ್ ಕ್ಲಿಕ್ ಬುಧವಾರ ರಾತ್ರಿ ಹೇಳಿಕೆಯೊಂದನ್ನು ನೀಡಿ, ‘‘ನಮ್ಮ ವಿರುದ್ಧ ಹೊರಿಸಲಾದ ಆರೋಪಗಳ ಕುರಿತಾದ ನಿಖರ ವಿವರಗಳನ್ನಾಗಲಿ ಅಥವಾ ಎಫ್ಐಆರ್ ಪ್ರತಿಯನ್ನಾಗಲಿ ಪೊಲೀಸರು ನೀಡಿಲ್ಲ’’ ಎಂದು ಹೇಳಿದೆ.

ಕಚೇರಿಯ ಆವರಣದಿಂದ ಹಾಗೂ ಅದರ ಉದ್ಯೋಗಿಗಳ ನಿವಾಸಗಳಿಂದ ಯಾವುದೇ ಕಾನೂನಾತ್ಮಕ ನಿಯಮಗಳನ್ನು ಅನುಸರಿಸದೆಯೇ ಇಲೆಕ್ಟ್ರಾನಿಕ್ ಸಲಕರಣೆಗಳು, ದಾಖಲೆ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಭಯೋತ್ಪಾದನೆ ನಿಗ್ರಹ ಕಾನೂನಿನಡಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವುದು , ಕೇಂದ್ರ ಸರಕಾರದ ವಿರುದ್ಧ ಯಾವುದೇ ಟೀಕೆಯನ್ನು ಮಾಡುವುದನ್ನು ದೇಶದ್ರೋಹ ಅಥವಾ ರಾಷ್ಟ್ರವಿರೋಧಿಯೆಂದು ಪರಿಗಣಿಸಲಾಗುವುದು ಎಂದು ಬೆದರಿಸುವ ಉದ್ದೇಶದಿಂದ ಕೂಡಿದೆ ಎಂದು ‘ನ್ಯೂಸ್ ಕ್ಲಿಕ್ ’ ತಿಳಿಸಿದೆ.

ತನ್ನ ಎಲ್ಲಾ ಮಾಹಿತಿ, ದಾಖಲೆಗಳು ಹಾಗೂ ಸಂವಹನ ಉಪಕರಣಗಳನ್ನು ವಶಪಡಿಸಿಕೊಂಡಿರುವ ಹೊರತಾಗಿಯೂ ತನ್ನ ವಿರುದ್ಧದ ಯಾವುದೇ ಆರೋಪಗಳನ್ನು ದೃಢಪಡಿಸಲು ಕೇಂದ್ರ ಸರಕಾರಕ್ಕೆ ಸಾಧ್ಯವಾಗಿಲ್ಲ. ತನ್ನ ವಿರುದ್ಧ ಕರಾಳವಾದ ಯುಎಪಿಎ ಕಾನೂನನ್ನು ಹೇರಲು ಅದಕ್ಕೆ ನ್ಯೂಯಾರ್ಕ್ ಟ್ರೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಬೋಗಸ್ ಲೇಖನವೊಂದು ಬೇಕಾಯಿತು.

ರೈತರು, ಕಾರ್ಮಿಕರು ಹಾಗೂ ಸಮಾಜದ ಇತರ ನಿರ್ಲಕ್ಷಿತ ವರ್ಗಗಳನ್ನೊಳಗೊಂಡ ವಾಸ್ತವಿಕ ಭಾರತದ ಕಥೆಯನ್ನು ಪ್ರಸ್ತುತಪಡಿಸುವ ಸ್ವತಂತ್ರ ಹಾಗೂ ನಿರ್ಭೀತ ಧ್ವನಿಗಳನ್ನು ಅಡಗಿಸುವ ಹಾಗೂ ಅದುಮಿಡುವ ಪ್ರಯತ್ನ ಇದಾಗಿದೆ ಎಂದು ನ್ಯೂಸ್ ಕ್ಲಿಕ್ ಹೇಳಿಕೆಯಲ್ಲಿ ತಿಳಿಸಿದೆ.

ಚೀನಾ ಪರವಾಗಿ ಪ್ರಚಾರ ಮಾಡಲು ನ್ಯೂಸ್ ಕ್ಲಿಕ್ ಸುದ್ದಿಜಾಲತಾಣವು ಅಮೆರಿಕ ಮೂಲದ ಮಿಲಿಯಾಧೀಶ ನೆವಿಲ್ ರಾಯ್ ಸಿಂಗಂ ಅವರಿಗೆ ಸೇರಿದ ನೆಟ್ವರ್ಕ್ ಮೂಲಕ ಭಾರೀ ಮೊತ್ತದ ನಿಧಿಗಳನ್ನು ಪಡೆದಿದೆಯೆಂದು ನೂಯಾರ್ಕ್ ಟೈಮ್ಸ್ ದೈನಿಕವು ಆಗಸ್ಟ್ 5ರಂದು ವರದಿ ಮಾಡಿತ್ತು.

ದೆಹಲಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ದಳಕ್ಕೆ ಭಾರತೀಯ ದಂಡಸಂಹಿತೆಯಡಿ ನ್ಯೂಸ್ ಕ್ಲಿಕ್ ವಿರುದ್ಧ ಒಂದೇ ಒಂದು ದೋಷಾರೋಪ ದಾಖಲಿಸಲು ಸಾಧ್ಯವಾಗಿಲ್ಲ ಎಂದು ನ್ಯೂಸ್ ಕ್ಲಿಕ್ ಹೇಳಿಕೆ ತಿಳಿಸಿದೆ.

ಮಂಗಳವಾರ ತನ್ನ ನಿವಾಸದ ಮೇಲೆ ನಡೆದ ದಾಳಿ ಕಾರ್ಯಾಚರಣೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ತನ್ನ ಬಳಿಕ 2020ರ ದೆಹಲಿ ಗಲಭೆ ಹಾಗೂ 2019-20ರಲ್ಲಿ ದೆಹಲಿಯ ಶಾಹೀನ್ ಭಾಗ್ ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ತಾನು ಮಾಡಿರುವ ವರದಿಗಾರಿಕೆಗಳ ಬಗ್ಗೆ ಪ್ರಶ್ನಿಸಿದರೆಂದು ನ್ಯೂಸ್ ಕ್ಲಿಕ್ ಪತ್ರಕರ್ತ ಅಭಿಸಾರ್ ಶರ್ಮಾ ಅವರು ತಿಳಿಸಿದ್ದಾರೆ.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago