BREAKING NEWS

ತನ್ನ ವಿರುದ್ಧ ಆರೋಪ ಸಾಬೀತುಪಡಿಸಲು ಕೇಂದ್ರ ಸರಕಾರ ವಿಫಲ: ನ್ಯೂಸ್ ಕ್ಲಿಕ್

ನವದೆಹಲಿ : ತಾನು ಅಕ್ರಮವಾಗಿ ವಿದೇಶಿ ದೇಣಿಗೆಯನ್ನು ಸ್ವೀಕರಿಸಿದ್ದೇನೆಂದು ತನ್ನ ವಿರುದ್ಧ ಹೊರಿಸಲಾದ ಆರೋಪಗಳನ್ನು ಸಾಬೀತುಪಡಿಸಲು ಕೇಂದ್ರ ಸರಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲವೆಂದು ‘ನ್ಯೂಸ್ ಕ್ಲಿಕ್ ’ ಸುದ್ದಿಜಾಲತಾಣ ಬುಧವಾರ ಹೇಳಿದೆ.

‘ನ್ಯೂಸ್ ಕ್ಲಿಕ್ ’ ಚೀನಾದಿಂದ ದೇಣಿಗೆ ಸ್ವೀಕರಿಸಿದೆಯೆದೆಂಬ ಆರೋಪಗಳ ಹಿನ್ನೆಲೆಯಲ್ಲಿ ದಿಲ್ಲಿ ಪೊಲೀಸರ ವಿಶೇಷ ದಳವು ಸುದ್ದಿಜಾಲತಾಣದ ಜೊತೆ ನಂಟು ಹೊಂದಿರುವ ಹಲವಾರು ಪತ್ರಕರ್ತರ ನಿವಾಸದ ಮೇಲೆ ದಾಳಿ ನಡೆಸಿತ್ತು ಹಾಗೂ ಸುದ್ದಿಜಾಲತಾಣದ ಕಚೇರಿಗೆ ಬೀಗಮುದ್ರೆ ಹಾಕಿದೆ.

ಈ ಬಗ್ಗೆ ನ್ಯೂಸ್ ಕ್ಲಿಕ್ ಬುಧವಾರ ರಾತ್ರಿ ಹೇಳಿಕೆಯೊಂದನ್ನು ನೀಡಿ, ‘‘ನಮ್ಮ ವಿರುದ್ಧ ಹೊರಿಸಲಾದ ಆರೋಪಗಳ ಕುರಿತಾದ ನಿಖರ ವಿವರಗಳನ್ನಾಗಲಿ ಅಥವಾ ಎಫ್ಐಆರ್ ಪ್ರತಿಯನ್ನಾಗಲಿ ಪೊಲೀಸರು ನೀಡಿಲ್ಲ’’ ಎಂದು ಹೇಳಿದೆ.

ಕಚೇರಿಯ ಆವರಣದಿಂದ ಹಾಗೂ ಅದರ ಉದ್ಯೋಗಿಗಳ ನಿವಾಸಗಳಿಂದ ಯಾವುದೇ ಕಾನೂನಾತ್ಮಕ ನಿಯಮಗಳನ್ನು ಅನುಸರಿಸದೆಯೇ ಇಲೆಕ್ಟ್ರಾನಿಕ್ ಸಲಕರಣೆಗಳು, ದಾಖಲೆ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಭಯೋತ್ಪಾದನೆ ನಿಗ್ರಹ ಕಾನೂನಿನಡಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವುದು , ಕೇಂದ್ರ ಸರಕಾರದ ವಿರುದ್ಧ ಯಾವುದೇ ಟೀಕೆಯನ್ನು ಮಾಡುವುದನ್ನು ದೇಶದ್ರೋಹ ಅಥವಾ ರಾಷ್ಟ್ರವಿರೋಧಿಯೆಂದು ಪರಿಗಣಿಸಲಾಗುವುದು ಎಂದು ಬೆದರಿಸುವ ಉದ್ದೇಶದಿಂದ ಕೂಡಿದೆ ಎಂದು ‘ನ್ಯೂಸ್ ಕ್ಲಿಕ್ ’ ತಿಳಿಸಿದೆ.

ತನ್ನ ಎಲ್ಲಾ ಮಾಹಿತಿ, ದಾಖಲೆಗಳು ಹಾಗೂ ಸಂವಹನ ಉಪಕರಣಗಳನ್ನು ವಶಪಡಿಸಿಕೊಂಡಿರುವ ಹೊರತಾಗಿಯೂ ತನ್ನ ವಿರುದ್ಧದ ಯಾವುದೇ ಆರೋಪಗಳನ್ನು ದೃಢಪಡಿಸಲು ಕೇಂದ್ರ ಸರಕಾರಕ್ಕೆ ಸಾಧ್ಯವಾಗಿಲ್ಲ. ತನ್ನ ವಿರುದ್ಧ ಕರಾಳವಾದ ಯುಎಪಿಎ ಕಾನೂನನ್ನು ಹೇರಲು ಅದಕ್ಕೆ ನ್ಯೂಯಾರ್ಕ್ ಟ್ರೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಬೋಗಸ್ ಲೇಖನವೊಂದು ಬೇಕಾಯಿತು.

ರೈತರು, ಕಾರ್ಮಿಕರು ಹಾಗೂ ಸಮಾಜದ ಇತರ ನಿರ್ಲಕ್ಷಿತ ವರ್ಗಗಳನ್ನೊಳಗೊಂಡ ವಾಸ್ತವಿಕ ಭಾರತದ ಕಥೆಯನ್ನು ಪ್ರಸ್ತುತಪಡಿಸುವ ಸ್ವತಂತ್ರ ಹಾಗೂ ನಿರ್ಭೀತ ಧ್ವನಿಗಳನ್ನು ಅಡಗಿಸುವ ಹಾಗೂ ಅದುಮಿಡುವ ಪ್ರಯತ್ನ ಇದಾಗಿದೆ ಎಂದು ನ್ಯೂಸ್ ಕ್ಲಿಕ್ ಹೇಳಿಕೆಯಲ್ಲಿ ತಿಳಿಸಿದೆ.

ಚೀನಾ ಪರವಾಗಿ ಪ್ರಚಾರ ಮಾಡಲು ನ್ಯೂಸ್ ಕ್ಲಿಕ್ ಸುದ್ದಿಜಾಲತಾಣವು ಅಮೆರಿಕ ಮೂಲದ ಮಿಲಿಯಾಧೀಶ ನೆವಿಲ್ ರಾಯ್ ಸಿಂಗಂ ಅವರಿಗೆ ಸೇರಿದ ನೆಟ್ವರ್ಕ್ ಮೂಲಕ ಭಾರೀ ಮೊತ್ತದ ನಿಧಿಗಳನ್ನು ಪಡೆದಿದೆಯೆಂದು ನೂಯಾರ್ಕ್ ಟೈಮ್ಸ್ ದೈನಿಕವು ಆಗಸ್ಟ್ 5ರಂದು ವರದಿ ಮಾಡಿತ್ತು.

ದೆಹಲಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ದಳಕ್ಕೆ ಭಾರತೀಯ ದಂಡಸಂಹಿತೆಯಡಿ ನ್ಯೂಸ್ ಕ್ಲಿಕ್ ವಿರುದ್ಧ ಒಂದೇ ಒಂದು ದೋಷಾರೋಪ ದಾಖಲಿಸಲು ಸಾಧ್ಯವಾಗಿಲ್ಲ ಎಂದು ನ್ಯೂಸ್ ಕ್ಲಿಕ್ ಹೇಳಿಕೆ ತಿಳಿಸಿದೆ.

ಮಂಗಳವಾರ ತನ್ನ ನಿವಾಸದ ಮೇಲೆ ನಡೆದ ದಾಳಿ ಕಾರ್ಯಾಚರಣೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ತನ್ನ ಬಳಿಕ 2020ರ ದೆಹಲಿ ಗಲಭೆ ಹಾಗೂ 2019-20ರಲ್ಲಿ ದೆಹಲಿಯ ಶಾಹೀನ್ ಭಾಗ್ ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ತಾನು ಮಾಡಿರುವ ವರದಿಗಾರಿಕೆಗಳ ಬಗ್ಗೆ ಪ್ರಶ್ನಿಸಿದರೆಂದು ನ್ಯೂಸ್ ಕ್ಲಿಕ್ ಪತ್ರಕರ್ತ ಅಭಿಸಾರ್ ಶರ್ಮಾ ಅವರು ತಿಳಿಸಿದ್ದಾರೆ.

andolanait

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

7 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

8 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

9 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

10 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

10 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

12 hours ago