BREAKING NEWS

ತನ್ನ ವಿರುದ್ಧ ಆರೋಪ ಸಾಬೀತುಪಡಿಸಲು ಕೇಂದ್ರ ಸರಕಾರ ವಿಫಲ: ನ್ಯೂಸ್ ಕ್ಲಿಕ್

ನವದೆಹಲಿ : ತಾನು ಅಕ್ರಮವಾಗಿ ವಿದೇಶಿ ದೇಣಿಗೆಯನ್ನು ಸ್ವೀಕರಿಸಿದ್ದೇನೆಂದು ತನ್ನ ವಿರುದ್ಧ ಹೊರಿಸಲಾದ ಆರೋಪಗಳನ್ನು ಸಾಬೀತುಪಡಿಸಲು ಕೇಂದ್ರ ಸರಕಾರಕ್ಕೆ ಇನ್ನೂ ಸಾಧ್ಯವಾಗಿಲ್ಲವೆಂದು ‘ನ್ಯೂಸ್ ಕ್ಲಿಕ್ ’ ಸುದ್ದಿಜಾಲತಾಣ ಬುಧವಾರ ಹೇಳಿದೆ.

‘ನ್ಯೂಸ್ ಕ್ಲಿಕ್ ’ ಚೀನಾದಿಂದ ದೇಣಿಗೆ ಸ್ವೀಕರಿಸಿದೆಯೆದೆಂಬ ಆರೋಪಗಳ ಹಿನ್ನೆಲೆಯಲ್ಲಿ ದಿಲ್ಲಿ ಪೊಲೀಸರ ವಿಶೇಷ ದಳವು ಸುದ್ದಿಜಾಲತಾಣದ ಜೊತೆ ನಂಟು ಹೊಂದಿರುವ ಹಲವಾರು ಪತ್ರಕರ್ತರ ನಿವಾಸದ ಮೇಲೆ ದಾಳಿ ನಡೆಸಿತ್ತು ಹಾಗೂ ಸುದ್ದಿಜಾಲತಾಣದ ಕಚೇರಿಗೆ ಬೀಗಮುದ್ರೆ ಹಾಕಿದೆ.

ಈ ಬಗ್ಗೆ ನ್ಯೂಸ್ ಕ್ಲಿಕ್ ಬುಧವಾರ ರಾತ್ರಿ ಹೇಳಿಕೆಯೊಂದನ್ನು ನೀಡಿ, ‘‘ನಮ್ಮ ವಿರುದ್ಧ ಹೊರಿಸಲಾದ ಆರೋಪಗಳ ಕುರಿತಾದ ನಿಖರ ವಿವರಗಳನ್ನಾಗಲಿ ಅಥವಾ ಎಫ್ಐಆರ್ ಪ್ರತಿಯನ್ನಾಗಲಿ ಪೊಲೀಸರು ನೀಡಿಲ್ಲ’’ ಎಂದು ಹೇಳಿದೆ.

ಕಚೇರಿಯ ಆವರಣದಿಂದ ಹಾಗೂ ಅದರ ಉದ್ಯೋಗಿಗಳ ನಿವಾಸಗಳಿಂದ ಯಾವುದೇ ಕಾನೂನಾತ್ಮಕ ನಿಯಮಗಳನ್ನು ಅನುಸರಿಸದೆಯೇ ಇಲೆಕ್ಟ್ರಾನಿಕ್ ಸಲಕರಣೆಗಳು, ದಾಖಲೆ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಭಯೋತ್ಪಾದನೆ ನಿಗ್ರಹ ಕಾನೂನಿನಡಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವುದು , ಕೇಂದ್ರ ಸರಕಾರದ ವಿರುದ್ಧ ಯಾವುದೇ ಟೀಕೆಯನ್ನು ಮಾಡುವುದನ್ನು ದೇಶದ್ರೋಹ ಅಥವಾ ರಾಷ್ಟ್ರವಿರೋಧಿಯೆಂದು ಪರಿಗಣಿಸಲಾಗುವುದು ಎಂದು ಬೆದರಿಸುವ ಉದ್ದೇಶದಿಂದ ಕೂಡಿದೆ ಎಂದು ‘ನ್ಯೂಸ್ ಕ್ಲಿಕ್ ’ ತಿಳಿಸಿದೆ.

ತನ್ನ ಎಲ್ಲಾ ಮಾಹಿತಿ, ದಾಖಲೆಗಳು ಹಾಗೂ ಸಂವಹನ ಉಪಕರಣಗಳನ್ನು ವಶಪಡಿಸಿಕೊಂಡಿರುವ ಹೊರತಾಗಿಯೂ ತನ್ನ ವಿರುದ್ಧದ ಯಾವುದೇ ಆರೋಪಗಳನ್ನು ದೃಢಪಡಿಸಲು ಕೇಂದ್ರ ಸರಕಾರಕ್ಕೆ ಸಾಧ್ಯವಾಗಿಲ್ಲ. ತನ್ನ ವಿರುದ್ಧ ಕರಾಳವಾದ ಯುಎಪಿಎ ಕಾನೂನನ್ನು ಹೇರಲು ಅದಕ್ಕೆ ನ್ಯೂಯಾರ್ಕ್ ಟ್ರೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಬೋಗಸ್ ಲೇಖನವೊಂದು ಬೇಕಾಯಿತು.

ರೈತರು, ಕಾರ್ಮಿಕರು ಹಾಗೂ ಸಮಾಜದ ಇತರ ನಿರ್ಲಕ್ಷಿತ ವರ್ಗಗಳನ್ನೊಳಗೊಂಡ ವಾಸ್ತವಿಕ ಭಾರತದ ಕಥೆಯನ್ನು ಪ್ರಸ್ತುತಪಡಿಸುವ ಸ್ವತಂತ್ರ ಹಾಗೂ ನಿರ್ಭೀತ ಧ್ವನಿಗಳನ್ನು ಅಡಗಿಸುವ ಹಾಗೂ ಅದುಮಿಡುವ ಪ್ರಯತ್ನ ಇದಾಗಿದೆ ಎಂದು ನ್ಯೂಸ್ ಕ್ಲಿಕ್ ಹೇಳಿಕೆಯಲ್ಲಿ ತಿಳಿಸಿದೆ.

ಚೀನಾ ಪರವಾಗಿ ಪ್ರಚಾರ ಮಾಡಲು ನ್ಯೂಸ್ ಕ್ಲಿಕ್ ಸುದ್ದಿಜಾಲತಾಣವು ಅಮೆರಿಕ ಮೂಲದ ಮಿಲಿಯಾಧೀಶ ನೆವಿಲ್ ರಾಯ್ ಸಿಂಗಂ ಅವರಿಗೆ ಸೇರಿದ ನೆಟ್ವರ್ಕ್ ಮೂಲಕ ಭಾರೀ ಮೊತ್ತದ ನಿಧಿಗಳನ್ನು ಪಡೆದಿದೆಯೆಂದು ನೂಯಾರ್ಕ್ ಟೈಮ್ಸ್ ದೈನಿಕವು ಆಗಸ್ಟ್ 5ರಂದು ವರದಿ ಮಾಡಿತ್ತು.

ದೆಹಲಿ ಪೊಲೀಸ್ ಇಲಾಖೆಯ ಆರ್ಥಿಕ ಅಪರಾಧಗಳ ದಳಕ್ಕೆ ಭಾರತೀಯ ದಂಡಸಂಹಿತೆಯಡಿ ನ್ಯೂಸ್ ಕ್ಲಿಕ್ ವಿರುದ್ಧ ಒಂದೇ ಒಂದು ದೋಷಾರೋಪ ದಾಖಲಿಸಲು ಸಾಧ್ಯವಾಗಿಲ್ಲ ಎಂದು ನ್ಯೂಸ್ ಕ್ಲಿಕ್ ಹೇಳಿಕೆ ತಿಳಿಸಿದೆ.

ಮಂಗಳವಾರ ತನ್ನ ನಿವಾಸದ ಮೇಲೆ ನಡೆದ ದಾಳಿ ಕಾರ್ಯಾಚರಣೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ತನ್ನ ಬಳಿಕ 2020ರ ದೆಹಲಿ ಗಲಭೆ ಹಾಗೂ 2019-20ರಲ್ಲಿ ದೆಹಲಿಯ ಶಾಹೀನ್ ಭಾಗ್ ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ತಾನು ಮಾಡಿರುವ ವರದಿಗಾರಿಕೆಗಳ ಬಗ್ಗೆ ಪ್ರಶ್ನಿಸಿದರೆಂದು ನ್ಯೂಸ್ ಕ್ಲಿಕ್ ಪತ್ರಕರ್ತ ಅಭಿಸಾರ್ ಶರ್ಮಾ ಅವರು ತಿಳಿಸಿದ್ದಾರೆ.

andolanait

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago