BREAKING NEWS

ದೇಶದ ರಫ್ತು ವಹಿವಾಟಿನಲ್ಲಿ ಮುಂದುವರಿದ ಕುಸಿತ, ಮೇನಲ್ಲಿ 10.3% ಇಳಿಕೆ

ನವದೆಹಲಿ: ಸತತ ನಾಲ್ಕನೇ ತಿಂಗಳು ಭಾರತದ ರಫ್ತು ವಹಿವಾಟು ಶೇ. 10.3ರಷ್ಟು ಕುಸಿತ ಕಂಡಿದ್ದು, ಮೇ ತಿಂಗಳಲ್ಲಿ 34.98 ಬಿಲಿಯನ್‌ ಡಾಲರ್‌ ಮೌಲ್ಯದ ರಫ್ತು ದಾಖಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿರುವ ಅಂಕಿ – ಅಂಶಗಳು ತಿಳಿಸಿವೆ.

ಇದರಿಂದ ವ್ಯಾಪಾರ ಕೊರತೆ 22.12 ಬಿಲಿಯನ್‌ ಡಾಲರ್‌ಗಳಿಗೆ ತಲುಪಿದ್ದು, ಐದು ತಿಂಗಳ ಗರಿಷ್ಠ ಮಟ್ಟ ದಾಖಲಾಗಿದೆ. ಪ್ರಮುಖ ಉತ್ಪನ್ನಗಳಾದ ಪೆಟ್ರೋಲಿಯಂ ವಸ್ತುಗಳು, ಚಿನ್ನಾಭರಣ, ಎಂಜಿನಿಯರಿಂಗ್‌ ಸರಕುಗಳು, ಜವಳಿ ಮತ್ತು ಸಿದ್ಧ ಉಡುಪುಗಳು ಹಾಗೂ ರಾಸಾಯನಿಕ ವಸ್ತುಗಳ ರಫ್ತಿನಲ್ಲಿ ನಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ.

ಆಮದು ಪ್ರಮಾಣದಲ್ಲಿ ಕೂಡ ಸತತ ಆರನೇ ತಿಂಗಳು ಶೇ. 6.6ರಷ್ಟು ಕುಸಿತ ಕಂಡುಬಂದಿದ್ದು, ವಹಿವಾಟಿನ ಪ್ರಮಾಣ 61.13 ಬಿಲಿಯನ್‌ ಡಾಲರ್‌ನಿಂದ 57.1 ಬಿಲಿಯನ್‌ ಡಾಲರ್‌ಗೆ ಇಳಿಕೆಯಾಗಿದೆ. ಕಳೆದ 2022ರಲ್ಲಿ ವ್ಯಾಪಾರ ಕೊರತೆ 22.13 ಬಿಲಿಯನ್‌ ಡಾಲರ್‌ನಷ್ಟಿತ್ತು. 2022ರ ಡಿಸೆಂಬರ್‌ನಲ್ಲಿ ಅತಿ ಕನಿಷ್ಠ 23.89 ಬಿಲಿಯನ್‌ ಡಾಲರ್‌ಗಳಿಗೆ ಕುಸಿದಿತ್ತು.

ಈ ವರ್ಷದ ಏಪ್ರಿಲ್‌ – ಮೇ ತಿಂಗಳಿನಲ್ಲಿ ಸಂಚಿತ ರಫ್ತು ವಹಿವಾಟು 69.72 ಬಿಲಿಯನ್‌ ಡಾಲರ್‌ಗಳಷ್ಟಿದ್ದು, ಕೇಂದ್ರ ಸರಕಾರದ ಅಂದಾಜಿಗಿಂತ ಶೇ. 11.41ರಷ್ಟು ಕಡಿಮೆಯಾಗಿದೆ. ಅಲ್ಲದೇ ಆಮದು ವಹಿವಾಟು 107 ಬಿಲಿಯನ್‌ ಡಾಲರ್‌ನಷ್ಟು ಆಗಿದ್ದು, ಇದು ಕೂಡ ಅಂದಾಜಿಗಿಂತ ಶೇ. 10.24ರಷ್ಟು ಕಡಿಮೆಯಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ವಾಣಿಜ್ಯ ಸಚಿವಾಲಯದ ಕಾರ್ಯದರ್ಶಿ ಸುನಿಲ್‌ ಬಥ್‌ರ್‌ವಾಲ್ ”ವಿಶ್ವ ವ್ಯಾಪಾರದಲ್ಲಿ ಆರ್ಥಿಕ ಹಿಂಜರಿತದ ಮತ್ತು ನಿಧಾನಗತಿಯ ಚಟುವಟಿಕೆಯ ಕಾರಣದಿಂದ ಭಾರತದ ಆಮದು – ರಫ್ತು ವಹಿವಾಟಿನ ಮೇಲಿನ ಪರಿಣಾಮ ಮುಂದುವರಿದಿದೆ. ಆದಷ್ಟು ಬೇಗನೇ ಆರ್ಥಿಕ ಸ್ಥಿತಿ ಸುಧಾರಿಸಿದಲ್ಲಿ ಬೇಡಿಕೆ ಹೆಚ್ಚಳಗೊಳ್ಳಲಿದೆ. ಆದಾಗ್ಯೂ ಸಚಿವಾಲಯ ವ್ಯಾಪಾರ ವೃದ್ಧಿಗೆ ಪೂರಕವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳುತ್ತಿದೆ,” ಎಂದು ಹೇಳಿದರು.

ಜುಲೈ 11ರಂದು ಜಿಎಸ್‌ಟಿ ಮಂಡಳಿ ಸಭೆ

ಹೊಸದಿಲ್ಲಿ: ಸರಕು ಹಾಗೂ ಸೇವೆಗಳ ತೆರಿಗೆ (ಜಿಎಸ್‌ಟಿ) ಮಂಡಳಿಯ 50ನೇ ಸಭೆಯು ಮಂಡಳಿಯ ಅಧ್ಯಕ್ಷರೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಧ್ಯಕ್ಷತೆಯಲ್ಲಿ ಜುಲೈ 11ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಈ ಕುರಿತು ಜಿಎಸ್‌ಟಿ ಮಂಡಳಿ ಗುರುವಾರ ಟ್ವಿಟರ್‌ ಮೂಲಕ ಮಾಹಿತಿ ಹಂಚಿಕೊಂಡಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದ ಅನುಸಾರ ದೇಶದಲ್ಲಿ ಆನ್‌ಲೈನ್‌ ಗೇಮಿಂಗ್‌ ಹಾಗೂ ಟ್ರೇಡಿಂಗ್‌ ಕುರಿತಂತೆ ತಜ್ಞರ ಸಮಿತಿ ಸಿದ್ಧಪಡಿಸಿರುವ ವರದಿ ಕುರಿತಂತೆ ಜಿಎಸ್‌ಟಿ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಬರುವ ಸಾಧ್ಯತೆಗಳಿವೆ. ಅಲ್ಲದೇ ಜಿಎಸ್‌ಟಿ ಕರ ನಿರ್ಧರಣೆ ಸಮಿತಿಯ ಸಂಚಾಲಕರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಸಿಎಂ ಸ್ಥಾನಕ್ಕೆ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜೀನಾಮೆ ನೀಡಿದ ಕಾರಣದಿಂದ ಸಂಚಾಲಕ ಹುದ್ದೆಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕೂಡ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ನಡೆಯಲಿದೆ.

ಬುಧವಾರವಷ್ಟೇ ಕರ್ನಾಟಕದಿಂದ ಜಿಎಸ್‌ಟಿ ಮಂಡಳಿ ಪ್ರತಿನಿಧಿಯಾಗಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಧ್ಯಕ್ಷರಾಗುವ ಪ್ರಶ್ನೆ ಈಗ ಉದ್ಭವಿಸುವುದಿಲ್ಲ. ಹೀಗಾಗಿ ಜಿಎಸ್‌ಟಿ ಕರ ನಿರ್ಧರಣೆ ಸಮಿತಿಯ ನೇತೃತ್ವ ಯಾರಿಗೆ ವಹಿಸಲಾಗುತ್ತದೆ ಎಂಬುದು ಈಗ ಕುತೂಹಲ ಕೆರಳಿಸಿದೆ. ಆದರೆ ಜಿಎಸ್‌ಟಿ ಮಂಡಳಿ ಸಭೆಯ ಅಜೆಂಡಾ ಕುರಿತಂತೆ ಮಂಡಳಿಯು ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.

andolanait

Recent Posts

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

32 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

4 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

4 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

4 hours ago