BREAKING NEWS

ದೇಶದ ರಫ್ತು ವಹಿವಾಟಿನಲ್ಲಿ ಮುಂದುವರಿದ ಕುಸಿತ, ಮೇನಲ್ಲಿ 10.3% ಇಳಿಕೆ

ನವದೆಹಲಿ: ಸತತ ನಾಲ್ಕನೇ ತಿಂಗಳು ಭಾರತದ ರಫ್ತು ವಹಿವಾಟು ಶೇ. 10.3ರಷ್ಟು ಕುಸಿತ ಕಂಡಿದ್ದು, ಮೇ ತಿಂಗಳಲ್ಲಿ 34.98 ಬಿಲಿಯನ್‌ ಡಾಲರ್‌ ಮೌಲ್ಯದ ರಫ್ತು ದಾಖಲಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಗುರುವಾರ ಬಿಡುಗಡೆ ಮಾಡಿರುವ ಅಂಕಿ – ಅಂಶಗಳು ತಿಳಿಸಿವೆ.

ಇದರಿಂದ ವ್ಯಾಪಾರ ಕೊರತೆ 22.12 ಬಿಲಿಯನ್‌ ಡಾಲರ್‌ಗಳಿಗೆ ತಲುಪಿದ್ದು, ಐದು ತಿಂಗಳ ಗರಿಷ್ಠ ಮಟ್ಟ ದಾಖಲಾಗಿದೆ. ಪ್ರಮುಖ ಉತ್ಪನ್ನಗಳಾದ ಪೆಟ್ರೋಲಿಯಂ ವಸ್ತುಗಳು, ಚಿನ್ನಾಭರಣ, ಎಂಜಿನಿಯರಿಂಗ್‌ ಸರಕುಗಳು, ಜವಳಿ ಮತ್ತು ಸಿದ್ಧ ಉಡುಪುಗಳು ಹಾಗೂ ರಾಸಾಯನಿಕ ವಸ್ತುಗಳ ರಫ್ತಿನಲ್ಲಿ ನಕಾರಾತ್ಮಕ ಬೆಳವಣಿಗೆ ಕಂಡುಬಂದಿದೆ.

ಆಮದು ಪ್ರಮಾಣದಲ್ಲಿ ಕೂಡ ಸತತ ಆರನೇ ತಿಂಗಳು ಶೇ. 6.6ರಷ್ಟು ಕುಸಿತ ಕಂಡುಬಂದಿದ್ದು, ವಹಿವಾಟಿನ ಪ್ರಮಾಣ 61.13 ಬಿಲಿಯನ್‌ ಡಾಲರ್‌ನಿಂದ 57.1 ಬಿಲಿಯನ್‌ ಡಾಲರ್‌ಗೆ ಇಳಿಕೆಯಾಗಿದೆ. ಕಳೆದ 2022ರಲ್ಲಿ ವ್ಯಾಪಾರ ಕೊರತೆ 22.13 ಬಿಲಿಯನ್‌ ಡಾಲರ್‌ನಷ್ಟಿತ್ತು. 2022ರ ಡಿಸೆಂಬರ್‌ನಲ್ಲಿ ಅತಿ ಕನಿಷ್ಠ 23.89 ಬಿಲಿಯನ್‌ ಡಾಲರ್‌ಗಳಿಗೆ ಕುಸಿದಿತ್ತು.

ಈ ವರ್ಷದ ಏಪ್ರಿಲ್‌ – ಮೇ ತಿಂಗಳಿನಲ್ಲಿ ಸಂಚಿತ ರಫ್ತು ವಹಿವಾಟು 69.72 ಬಿಲಿಯನ್‌ ಡಾಲರ್‌ಗಳಷ್ಟಿದ್ದು, ಕೇಂದ್ರ ಸರಕಾರದ ಅಂದಾಜಿಗಿಂತ ಶೇ. 11.41ರಷ್ಟು ಕಡಿಮೆಯಾಗಿದೆ. ಅಲ್ಲದೇ ಆಮದು ವಹಿವಾಟು 107 ಬಿಲಿಯನ್‌ ಡಾಲರ್‌ನಷ್ಟು ಆಗಿದ್ದು, ಇದು ಕೂಡ ಅಂದಾಜಿಗಿಂತ ಶೇ. 10.24ರಷ್ಟು ಕಡಿಮೆಯಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ವಾಣಿಜ್ಯ ಸಚಿವಾಲಯದ ಕಾರ್ಯದರ್ಶಿ ಸುನಿಲ್‌ ಬಥ್‌ರ್‌ವಾಲ್ ”ವಿಶ್ವ ವ್ಯಾಪಾರದಲ್ಲಿ ಆರ್ಥಿಕ ಹಿಂಜರಿತದ ಮತ್ತು ನಿಧಾನಗತಿಯ ಚಟುವಟಿಕೆಯ ಕಾರಣದಿಂದ ಭಾರತದ ಆಮದು – ರಫ್ತು ವಹಿವಾಟಿನ ಮೇಲಿನ ಪರಿಣಾಮ ಮುಂದುವರಿದಿದೆ. ಆದಷ್ಟು ಬೇಗನೇ ಆರ್ಥಿಕ ಸ್ಥಿತಿ ಸುಧಾರಿಸಿದಲ್ಲಿ ಬೇಡಿಕೆ ಹೆಚ್ಚಳಗೊಳ್ಳಲಿದೆ. ಆದಾಗ್ಯೂ ಸಚಿವಾಲಯ ವ್ಯಾಪಾರ ವೃದ್ಧಿಗೆ ಪೂರಕವಾಗಿ ಕೆಲವು ಕ್ರಮಗಳನ್ನು ಕೈಗೊಳ್ಳುತ್ತಿದೆ,” ಎಂದು ಹೇಳಿದರು.

ಜುಲೈ 11ರಂದು ಜಿಎಸ್‌ಟಿ ಮಂಡಳಿ ಸಭೆ

ಹೊಸದಿಲ್ಲಿ: ಸರಕು ಹಾಗೂ ಸೇವೆಗಳ ತೆರಿಗೆ (ಜಿಎಸ್‌ಟಿ) ಮಂಡಳಿಯ 50ನೇ ಸಭೆಯು ಮಂಡಳಿಯ ಅಧ್ಯಕ್ಷರೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಧ್ಯಕ್ಷತೆಯಲ್ಲಿ ಜುಲೈ 11ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಈ ಕುರಿತು ಜಿಎಸ್‌ಟಿ ಮಂಡಳಿ ಗುರುವಾರ ಟ್ವಿಟರ್‌ ಮೂಲಕ ಮಾಹಿತಿ ಹಂಚಿಕೊಂಡಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದ ಅನುಸಾರ ದೇಶದಲ್ಲಿ ಆನ್‌ಲೈನ್‌ ಗೇಮಿಂಗ್‌ ಹಾಗೂ ಟ್ರೇಡಿಂಗ್‌ ಕುರಿತಂತೆ ತಜ್ಞರ ಸಮಿತಿ ಸಿದ್ಧಪಡಿಸಿರುವ ವರದಿ ಕುರಿತಂತೆ ಜಿಎಸ್‌ಟಿ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಬರುವ ಸಾಧ್ಯತೆಗಳಿವೆ. ಅಲ್ಲದೇ ಜಿಎಸ್‌ಟಿ ಕರ ನಿರ್ಧರಣೆ ಸಮಿತಿಯ ಸಂಚಾಲಕರಾಗಿದ್ದ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಸಿಎಂ ಸ್ಥಾನಕ್ಕೆ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜೀನಾಮೆ ನೀಡಿದ ಕಾರಣದಿಂದ ಸಂಚಾಲಕ ಹುದ್ದೆಗೆ ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕೂಡ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ನಡೆಯಲಿದೆ.

ಬುಧವಾರವಷ್ಟೇ ಕರ್ನಾಟಕದಿಂದ ಜಿಎಸ್‌ಟಿ ಮಂಡಳಿ ಪ್ರತಿನಿಧಿಯಾಗಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಧ್ಯಕ್ಷರಾಗುವ ಪ್ರಶ್ನೆ ಈಗ ಉದ್ಭವಿಸುವುದಿಲ್ಲ. ಹೀಗಾಗಿ ಜಿಎಸ್‌ಟಿ ಕರ ನಿರ್ಧರಣೆ ಸಮಿತಿಯ ನೇತೃತ್ವ ಯಾರಿಗೆ ವಹಿಸಲಾಗುತ್ತದೆ ಎಂಬುದು ಈಗ ಕುತೂಹಲ ಕೆರಳಿಸಿದೆ. ಆದರೆ ಜಿಎಸ್‌ಟಿ ಮಂಡಳಿ ಸಭೆಯ ಅಜೆಂಡಾ ಕುರಿತಂತೆ ಮಂಡಳಿಯು ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.

andolanait

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

4 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

5 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

5 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

9 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

10 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

10 hours ago