BREAKING NEWS

ಹೆತ್ತ ತಾಯಿ ಕೊಂದು ಸೂಟ್‌ಕೇಸಲ್ಲಿ ಶವಹೊತ್ತು ಸ್ಟೇಷನ್‌ಗೆ ಬಂದ ಮಗಳು

ಬೆಂಗಳೂರು : ತಾಯಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ.

ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾರೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ.

ತಾಯಿ ಹೊಟ್ಟೆ ನೋವು ಎಂದಾಗ ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ‍್ಯಾಲಿ ಸೂಟ್‌ಕೇಸ್‌ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್‌ಗೆ ಬಂದಿದ್ದಾಳೆ.

ಬಿಳೇಕಳ್ಳಿಯ ಎನ್‌ಎಸ್‌ಆರ್ ಗ್ರೀನ್ ಅಪಾರ್ಟ್ಮೆಂಟ್‌ನಿಂದ ತಾಯಿಯ ಮೃತದೇಹದೊಂದಿಗೆ ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.

ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್‌ಳನ್ನು ಬಂಧಿಸಿದ್ದಾರೆ.

 

lokesh

Recent Posts

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

28 mins ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

51 mins ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

1 hour ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

2 hours ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

3 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

3 hours ago