BREAKING NEWS

ಹೆತ್ತ ತಾಯಿ ಕೊಂದು ಸೂಟ್‌ಕೇಸಲ್ಲಿ ಶವಹೊತ್ತು ಸ್ಟೇಷನ್‌ಗೆ ಬಂದ ಮಗಳು

ಬೆಂಗಳೂರು : ತಾಯಿಯನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ಹೊತ್ತುಕೊಂಡು ಮಗಳು ಪೊಲೀಸ್ ಠಾಣೆಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಸೆನಾಲಿ ಸೇನ್ (39) ಹೆತ್ತ ತಾಯಿಯನ್ನು ಕೊಲೆ ಮಾಡಿದಾಕೆ. 70 ವರ್ಷದ ಬೀವಾ ಪಾಲ್ ಕೊಲೆಯಾದ ವೃದ್ಧೆ.

ಸೆನಾಲಿ ಸೇನ್ ಅಮ್ಮ ಮತ್ತು ಅತ್ತೆ ಒಂದೇ ಮನೆಯಲ್ಲಿದ್ದರು. ಇಬ್ಬರೂ ದಿನಾ ಗಲಾಟೆ ಮಾಡಿಕೊಳ್ಳುತ್ತಿದ್ದರು. ಬೀಗರ ಜಗಳಕ್ಕೆ ಬೇಸತ್ತಿದ್ದ ಬೀವಾ ಪಾಲ್ ನಿದ್ರೆ ಮಾತ್ರೆ ನುಂಗಿ ಸಾಯೋದಾಗಿ ಹೇಳಿದ್ದಾರೆ. ಬೆದರಿಕೆಯಂತೆಯೇ ಮುಂಜಾನೆ ಸೆನಾಲಿ ಸೇನ್ ತನ್ನ ತಾಯಿಗೆ 20 ನಿದ್ರೆ ಮಾತ್ರೆ ನುಂಗಿಸಿದ್ದಾಳೆ.

ತಾಯಿ ಹೊಟ್ಟೆ ನೋವು ಎಂದಾಗ ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ. ಟ್ರ‍್ಯಾಲಿ ಸೂಟ್‌ಕೇಸ್‌ನಲ್ಲಿ ತಾಯಿ ಶವವಿಟ್ಟು, ತಂದೆಯ ಫೋಟೊ ಇಟ್ಟು ಮಗಳು ಸ್ಟೇಷನ್‌ಗೆ ಬಂದಿದ್ದಾಳೆ.

ಬಿಳೇಕಳ್ಳಿಯ ಎನ್‌ಎಸ್‌ಆರ್ ಗ್ರೀನ್ ಅಪಾರ್ಟ್ಮೆಂಟ್‌ನಿಂದ ತಾಯಿಯ ಮೃತದೇಹದೊಂದಿಗೆ ಮೈಕೊಲೇಔಟ್ ಪೊಲೀಸ್ ಠಾಣೆಗೆ ಸೆನಾಲಿ ಬೇನ್ ಬಂದಿದ್ದಾಳೆ. ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ.

ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆನಾಲಿ ಸೇನ್‌ಳನ್ನು ಬಂಧಿಸಿದ್ದಾರೆ.

 

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

5 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago